Wednesday, April 24, 2024
spot_imgspot_img
spot_imgspot_img

ನಾಳೆ ಮಧ್ಯರಾತ್ರಿವರೆಗೆ ವಿಧಾನಸೌಧದ ಸುತ್ತ ನಿಷೇಧಾಜ್ಞೆ

- Advertisement -G L Acharya panikkar
- Advertisement -

ಬೆಂಗಳೂರು: ಪಂಚಮಸಾಲಿ ಸಮುದಾಯದ ಮುಖಂಡರು ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿರುವ ಬೆನ್ನಲ್ಲೆ ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆ ಜಾರಿಮಾಡಲಾಗಿದೆ. ವಿಧಾನಸೌಧದ 2 ಕಿ.ಮೀ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ ಮಾಡಿ ನಗರ ಪೊಲೀಸ್​ ಆಯುಕ್ತ ಕಮಲ್​ಪಂತ್​ ಆದೇಶ ಹೊರಡಿಸಿದ್ದಾರೆ.

2ಎ ಮೀಸಲಾತಿಗಾಗಿ ಆಗ್ರಹಿಸಿರೋ ಪಂಚಮಸಾಲಿ ಸಮುದಾಯದ ಮುಖಂಡರು ಜಯಮೃತ್ಯುಂಜಯ ಸ್ವಾಮೀಜಿ ಹಾಗೂ ವಚನಾನಂದ ಸ್ವಾಮೀಜಿ ನೇತೃತ್ವದಲ್ಲಿ ನಗರದಲ್ಲಿ ಬೃಹತ್​ ಸಮಾವೇಶ ನಡೆಸುತ್ತಿದ್ದಾರೆ. ಸಮಾವೇಶ ಮುಗಿಯುವ ವೇಳೆಗೆ ಮೀಸಲಾತಿ ಕುರಿತ ಸಿಹಿಸುದ್ದಿ ನೀಡಬೇಕೆಂದು ಗಡುವು ಕೊಟ್ಟಿದ್ದಾರೆ.

ಒಂದು ವೇಳೆ ಮೀಸಲಾತಿ ನೀಡದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.ಈ ಹಿನ್ನೆಲೆಯಲ್ಲಿ ನಗರ ಪೊಲೀಸ್​ ಆಯುಕ್ತರು ಇಂದಿನಿಂದ ನಾಳೆ ಅಂದರೆ ಫೆ.22ರ ಮಧ್ಯರಾತ್ರಿವರೆಗೆ ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ.

- Advertisement -

Related news

error: Content is protected !!