Sunday, May 12, 2024
spot_imgspot_img
spot_imgspot_img

ರಾಜರಾಜೇಶ್ವರಿ ನಗರ ವಿಧಾನಸಭಾ ಚುನಾವಣೆ-ಬಿ.ಎಸ್.ವೈ, ಡಿಕೆಶಿ ಮತ್ತು ಹೆಚ್.ಡಿ.ಕೆ ನಡುವೆ ಹಣಾಹಣಿ !!

- Advertisement -G L Acharya panikkar
- Advertisement -

ಬೆಂಗಳೂರು: ಬೆಂಗಳೂರು ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ನವೆಂಬರ್ 3ರಂದು ಮತದಾನ ನಿಗದಿಯಾಗಿದೆ. ನವೆಂಬರ್ 10ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

ಬೆಂಗಳೂರು ನಗರದ ಹೊರವಲಯದ ಆರ್ ಆರ್ ನಗರದಲ್ಲಿ ಕಾಂಗ್ರೆಸ್ ಶಾಸಕರಾಗಿದ್ದ ಮುನಿರತ್ನ ಅವರು ಬಿಜೆಪಿಗೆ ಪಕ್ಷಾಂತರಗೊಂಡು ಶಾಸಕ ಸ್ಥಾನದಿಂದ ಅನರ್ಹಗೊಳ್ಳುವುದರೊಂದಿಗೆ ಈ ಸ್ಥಾನ ತೆರವಾಗಿತ್ತು.

ಈ ಎರಡು ಸ್ಥಾನಗಳ ಉಪಚುನಾವಣೆ ರಾಜ್ಯದ ಮೂರು ಪಕ್ಷಗಳಿಗೂ ಅಕ್ಷರಶಃ ಪ್ರತಿಷ್ಠೆಯ ವಿಚಾರವಾಗಿದೆ. ಆಡಳಿತಾರೂಢ ಬಿಜೆಪಿ, ವಿಪಕ್ಷಗಳಾದ ಜೆಡಿಎಸ್ ಮತ್ತು ಕಾಂಗ್ರೆಸ್ ಈ ಉಪಚುನಾವಣೆಯನ್ನು ಬಹಳ ಗಂಭೀರವಾಗಿ ಪರಿಗಣಿಸಿವೆ. ಅಭ್ಯರ್ಥಿಗಳು ಯಾರೇ ಆದರೂ ಇವೆರಡು ಕ್ಷೇತ್ರಗಳಲ್ಲಿ ಬಿ.ಎಸ್. ಯಡಿಯೂರಪ್ಪ, ಡಿಕೆ ಶಿವಕುಮಾರ್ ಮತ್ತು ಹೆಚ್.ಡಿ. ಕುಮಾರಸ್ವಾಮಿ ಅವರ ಮಧ್ಯೆ ನಡೆಯುತ್ತಿರುವ ಹಣಾಹಣಿ ಇದು ಎಂದು ಪರಿಗಣಿಸಲಾಗಿದೆ.

- Advertisement -

Related news

error: Content is protected !!