


ವಿಟ್ಲ: ವ್ಯಕ್ತಿಯೋರ್ವರು ವಿಟ್ಲ ಕಡೆಗೆ ಬರುತ್ತಿದ್ದ ವೇಳೆ ಕಾರು ಚಾಲಕ ಅಜಾಗರೂಕತೆ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದು ದ್ವಿಚಕ್ರ ವಾಹನದ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕು ವಿಟ್ಲ ಕಸಬ ಗ್ರಾಮದ ವಿಟ್ಲ ನಾಡ ಕಚೇರಿ ಬಳಿ ನಡೆದಿದೆ.
ಗಾಯಗೊಂಡ ವ್ಯಕ್ತಿ ಉಮೇಶ್ (38) ಎಂದು ಗುರುತಿಸಲಾಗಿದೆ.
ವೀರಕಂಭ ಗ್ರಾಮ ಬಂಟ್ವಾಳ ಉಮೇಶ್ ಎಂಬವರು ದ್ವಿಚಕ್ರ ವಾಹನದಲ್ಲಿ ವಿಟ್ಲ-ಸಾಲೆತ್ತೂರು ಮಾರ್ಗದಲ್ಲಿ ಕಡೆಗೆ ಸವಾರಿ ಮಾಡಿಕೊಂಡು ಬರುತ್ತಿದ್ದ ವೇಳೆ ಬಂಟ್ವಾಳ ತಾಲೂಕು ವಿಟ್ಲ ಕಸಬ ಗ್ರಾಮದ ವಿಟ್ಲ ನಾಡ ಕಚೇರಿ ಬಳಿಯಲ್ಲಿ ಸಾಲೆತ್ತೂರು ಕಡೆಯಿಂದ ಕಾರು ಚಾಲಕ ಅಜಾಗರೂಕತೆ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದು ದ್ವಿಚಕ್ರ ವಾಹನದ ಹಿಂಬದಿಗೆ ಡಿಕ್ಕಿ ಹೊಡೆದಿರುತ್ತಾನೆ. ಪರಿಣಾಮ ಗಾಯಗೊಂಡ ಉಮೇಶ್ರವರನ್ನು ಸ್ಥಳೀಯ ಆರೋಗ್ಯ ಕೆಂದ್ರದಲ್ಲಿ ಪ್ರಥಮ ಚಿಕಿತ್ಸೆ ಪಡೆದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಕೆ ಎಎಸ್ ಹೆಗ್ಡೆ ಆಸ್ಪತ್ರೆಗೆ ದಾಖಲಾಗಿರುತ್ತಾರೆ. ಈ ಬಗ್ಗೆ ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 126/2024 ಕಲಂ:281,125 (a) (BNS) 2023 ರಂತೆ ಪ್ರಕರಣ ದಾಖಲಾಗಿರುತ್ತದೆ.