- Advertisement -
- Advertisement -
ಭಾರತೀಯ ಬ್ಯಾಂಕ್ಗಳಿಗೆ ಸಾವಿರಾರು ಕೋಟಿ ರೂ. ಸಾಲ ಪಡೆದು ವಂಚಿಸಿ ವಿದೇಶಕ್ಕೆ ಪರಾರಿಯಾದ ಉದ್ಯಮಿ ವಿಜಯ್ ಮಲ್ಯಗೆ ಇದೀಗ ಮತ್ತೆ ಸಂಕಷ್ಟ ಹೆಚ್ಚಾಗಿದೆ. ಉದ್ಯಮಿ ವಿಜಯ್ ಮಲ್ಯ ದಿವಾಳಿ ಎಂದು ಲಂಡನ್ ಹೈಕೋರ್ಟ್ ಘೋಷಿಸಿದೆ.
ಸಾಲ ವಸೂಲಾತಿಗೆ ಲಂಡನ್ ಕೋರ್ಟ್ ನ ಈ ಘೋಷಣೆಯಿಂದ ಬ್ಯಾಂಕ್ಗಳ ದಾರಿ ಮತ್ತಷ್ಟು ಸಲೀಸಾಗಿದೆ. ಭಾರತದ ಬ್ಯಾಂಕ್ಗಳಿಗೆ ಸಾಲ ಮರುಪಾವತಿಸದ ಹಿನ್ನೆಲೆಯಲ್ಲಿ ಫ್ರಾನ್ಸ್ ನಲ್ಲಿನ 14 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ED) ಮುಟ್ಟುಗೋಲು ಹಾಕಿಕೊಂಡಿತ್ತು. ಕೋರ್ಟ್ ನ ಈ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸುವುದಾಗಿ ಮಲ್ಯ ಹೇಳಿದ್ದಾರೆ. ಆದರೆ ಇದಕ್ಕೆ ಅನುಮತಿ ನಿರಾಕರಿಸಲಾಗಿದೆ. ಭಾರತದಲ್ಲಿರುವ ತಮ್ಮ ಆಸ್ತಿಗೆ ಭದ್ರತೆ ನೀಡಬೇಕೆಂದು ಲಂಡನ್ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.
- Advertisement -