- Advertisement -
- Advertisement -
ಲಾರಿ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಸೊಲ್ಲಾಪುರ ರಸ್ತೆಯಲ್ಲಿ ಈ ಘಟನೆ ನಡೆದಿದೆ. ವಿಜಯಪುರ ನಗರದ ಚಂದಾಬಾವಡಿ ನಿವಾಸಿ ಉಮರ್ ಬುಡನಸಾಬ್ ಲಾಟಿ (23) ಮೃತಪಟ್ಟ ಯುವಕ.
ಅಪಘಾತದಿಂದ ಮತ್ತೋರ್ವ ಸಹ ಸವಾರನಿಗೆ ಗಂಭೀರ ಗಾಯಗಳಾಗಿದೆ. ಈ ಅಪಘಾತ ಸಂಭವಿಸುತ್ತಿದ್ದಂತೆಯೇ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ವಿಜಯಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
- Advertisement -