ನವದೆಹಲಿ: ಹಲವು ತಿಂಗಳ ಊಹಾಪೋಹಗಳ ನಂತರ ಕಾಂಗ್ರೆಸ್ ಸ್ಟಾರ್ ಪ್ರಚಾರಕಿ ಮತ್ತು ಮಾಜಿ ಸಂಸದೆ ವಿಜಯ ಶಾಂತಿ ನಾಳೆ ದೆಹಲಿಗೆ ತೆರಳಲಿದ್ದು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆ ಬಹುತೇಕ ಖಾತ್ರಿಯಾಗಿದೆ.
ವಿಜಯಶಾಂತಿ ಬಿಜೆಪಿಗೆ ಮತ್ತೆ ಸೇರ್ಪಡೆಯಾಗುತ್ತಿರುವುದರಿಂದ ಡಿಸೆಂಬರ್ 1 ರಂದು ನಡೆಯಲಿರುವ ಜಿಹೆಚ್ ಎಂಸಿಯ 150 ವಾರ್ಡ್ ಗಳ ಚುನಾವಣೆಯ ಪ್ರಚಾರಕ್ಕೆ ಬಲ ಬಂದಂತಾಗಿದೆ.ವಿಜಯ ಶಾಂತಿ ಬಿಜೆಪಿಗೆ ಸೇರ್ಪಡೆಯಾದರೆ ರಾಷ್ಟ್ರೀಯ ಮಟ್ಟದಲ್ಲಿ ಪಕ್ಷದಲ್ಲಿ ಉನ್ನತ ಸ್ಥಾನ ಪಡೆಯಲಿದ್ದಾರೆ.
ಪಕ್ಷದಲ್ಲಿ ಎರಡನೇ ಉನ್ನತ ನಾಯಕರಾದ ಅಮಿತ್ ಶಾ ಅವರ ಸಮ್ಮುಖದಲ್ಲಿ ವಿಜಯ ಶಾಂತಿ ಬಿಜೆಪಿಗೆ ಸೇರಲಿದ್ದಾರೆ ಎಂದು ಅವರ ಆಪ್ತ ಮೂಲಗಳಿಂದ ತಿಳಿದುಬಂದಿದೆ. ವಿಜಯಶಾಂತಿ ಬಿಜೆಪಿ ಸೇರ್ಪೆಯಾಗುತ್ತಿದ್ದಂತೆ ಮುಂಬರುವ ಜಿಹೆಚ್ ಎಂಸಿ ಚುನಾವಣೆ ತದನಂತರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಪರ ಪ್ರಚಾರ ನಡೆಸಲಿದ್ದಾರೆ.
80 ಹಾಗೂ 90ರ ದಶಕದಲ್ಲಿ ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ಮಿಂಚಿದ್ದ ವಿಜಯ ಶಾಂತಿ ಧೀರ್ಘಕಾಲದ ವಿರಾಮದ ಬಳಿಕ ಮಹೇಶ್ ಬಾಬು ಅವರ ಸರಿಲೇರು ನೀಕೇವರ ಚಿತ್ರದ ಮೂಲಕ ಮತ್ತೆ ಟಾಲಿವುಡ್ ಗೆ ಕಮ್ ಬ್ಯಾಕ್ ಆಗಿದ್ದರು.