Saturday, May 4, 2024
spot_imgspot_img
spot_imgspot_img

ಮಂಗಳೂರು: ಮರಣ ಪ್ರಮಾಣ ಪತ್ರ ನೀಡಲು ಲಂಚಕ್ಕೆ ಬೇಡಿಕೆ- ಗ್ರಾಮ ಲೆಕ್ಕಿಗ ಅರೆಸ್ಟ್

- Advertisement -G L Acharya panikkar
- Advertisement -

ಮಂಗಳೂರು: ಮರಣ ಪ್ರಮಾಣ ಪತ್ರ ಮಾಡಿ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟ ಆಡಳಿತ ಅಧಿಕಾರಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ಚೇಳ್ಯಾರಿನಲ್ಲಿ ನಡೆದಿದೆ.

ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಅಧಿಕಾರಿಯನ್ನು ಚೇಳ್ಯಾರು ಗ್ರಾಮ ಅಧಿಕಾರಿ ವಿಜಿತ್ ಎಂದು ಗುರುತಿಸಲಾಗಿದೆ.

ವ್ಯಕ್ತಿಯೊಬ್ಬರು ತನ್ನ ತಾಯಿಯ ಹೆಸರಿನಲ್ಲಿದ್ದ ಜಾಗದಲ್ಲಿ 5 ಸೆಟ್ಸ್ ಜಾಗವನ್ನು ಮಾರಾಟ ಮಾಡುವ ಉದ್ದೇಶದಿಂದ ಅಜ್ಜನ ಮರಣ ಪತ್ರ ಹಾಗೂ ಸಂತತಿ ನಕ್ಷೆ ಮಾಡಲು ಮುಂದಾಗಿದ್ದು ಮಂಗಳೂರು ತಾಲೂಕಿನ ಚೇಳ್ಯಾರು ಗ್ರಾಮದ ಗ್ರಾಮ ಲೆಕ್ಕಿಗ ವಿಜಿತ್ ಬಳಿ ಅರ್ಜಿ ಹಾಕಿದ್ದರು.

ಈತನು ನ. 20 ರಂದು ವ್ಯಕ್ತಿಗೆ ಕರೆಮಾಡಿ ನಿಮ್ಮ ಅಜ್ಜನ ಮರಣ ಪ್ರಮಾಣ ಪತ್ರ ರೆಡಿಯಾಗಿದೆ, 15 ಸಾವಿರ ಹಿಡಿದುಕೊಂಡು ಬನ್ನಿ ಎಂದು ಹೇಳಿದ್ದರು. ಆಗ ವ್ಯಕ್ತಿಯ ಬಳಿ ಅಷ್ಟು ಹಣ ಇಲ್ಲ ಎಂದು ಹೇಳಿದಾಗ, ಕೊನೆಗೆ 13 ಸಾವಿರ ಹಣವನ್ನು ಸುರತ್ಕಲ್ ನಾಡ ಕಚೇರಿಗೆ ತಂದುಕೊಡಿ ಎಂದು ಹೇಳಿದರು. ಈ ಬಗ್ಗೆ ಆ ವ್ಯಕ್ತಿಯು ಲೋಕಾಯುಕ್ತಕ್ಕೆ ದೂರನ್ನು ನೀಡಿದ್ದು ಹಣ ಪಡೆಯುತ್ತಿರುವಾಗಲೇ ರೆಡ್ ಹ್ಯಾಂಡ್ ಆಗಿ ಅರೆಸ್ಟ್ ಮಾಡಿದ್ದಾರೆ.

- Advertisement -

Related news

error: Content is protected !!