Saturday, April 27, 2024
spot_imgspot_img
spot_imgspot_img

ಕೋವಿಡ್ ಪರಿಹಾರ ನಿಧಿಗೆ 2 ಕೋಟಿ ನೆರವು ನೀಡಿದ ವಿರುಷ್ಕಾ ದಂಪತಿ

- Advertisement -G L Acharya panikkar
- Advertisement -

ಮುಂಬೈ: ನಟಿ ಅನುಷ್ಕಾ ಶರ್ಮಾ ಮತ್ತು ಅವರ ಪತಿ ವಿರಾಟ್ ಕೊಯ್ಲಿ ನಿಧಿ ಸಂಗ್ರಹಕ್ಕೆ ಅಭಿಯಾನ ಶುರು ಮಾಡಿದ್ದಾರೆ. ಇದರ ಮೊದಲ ಹೆಜ್ಜೆ ಎಂಬಂತೆ 2 ಕೋಟಿ ರೂ.ಗಳನ್ನು ಈ ಸ್ಟಾರ್ ದಂಪತಿ ದೇಣಿಗೆಯಾಗಿ ನೀಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋವೊಂದನ್ನು ಹಂಚಿಕೊಳ್ಳುವ ಮೂಲಕ ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಯ್ಲಿ ಮಾಹಿತಿ ನೀಡಿದ್ದಾರೆ.

ಕೊವಿಡ್‍ನಿಂದಾಗಿ ಭಾರತದ ಪರಿಸ್ಥಿತಿ ಕಷ್ಟದಲ್ಲಿದೆ. ದೇಶವನ್ನು ಈ ರೀತಿ ನೋಡಲು ನೋವಾಗುತ್ತದೆ. ಈ ಸಂದರ್ಭದಲ್ಲಿ ಹಗಲು-ರಾತ್ರಿ ಹೋರಾಡುತ್ತಿರುವ ಎಲ್ಲರಿಗೂ ನಾವು ಆಭಾರಿ ಆಗಿದ್ದೇವೆ. ಅವರ ಬದ್ಧತೆಯನ್ನು ಮೆಚ್ಚಲೇಬೇಕು. ಈ ಸಂದರ್ಭದಲ್ಲಿ ಅವರಿಗೆ ನಮ್ಮ ಬೆಂಬಲ ಬೇಕು. ಈ ಕಷ್ಟದ ಸಂದರ್ಭದಲ್ಲಿ ನಾವೆಲ್ಲರೂ ಒಂದಾಗಿರಬೇಕು. ಎಷ್ಟು ಸಾಧ್ಯವೋ ಅಷ್ಟು ಜೀವಗಳನ್ನು ನಾವು ಕಾಪಾಡಬೇಕು ಎಂದು ಹೇಳಿದ್ದಾರೆ.

ಕಳೆದ ವರ್ಷದಿಂದಲೂ ಜನರು ಪಡುತ್ತಿರುವ ಕಷ್ಟ ನೋಡಿ ನಮಗೆ ಶಾಕ್ ಆಗಿದೆ. ನಮ್ಮ ಕೈಲಾದ ಸಹಾಯವನ್ನು ಮಾಡಲು ಮೊದಲಿನಿಂದಲೂ ಪ್ರಯತ್ನಿಸುತ್ತಿದ್ದೇವೆ. ಈ ಸಂದರ್ಭದಲ್ಲಿ ದೇಶಕ್ಕೆ ಎಲ್ಲಕ್ಕಿಂತ ಹೆಚ್ಚು ಬೆಂಬಲ ಬೇಕಾಗಿದೆ. ಅವಶ್ಯಕತೆ ಇರುವವರಿಗೆ ಸೂಕ್ತ ಸಹಾಯ ಒದಗಿಸಲು ಈ ನಿಧಿ ಸಂಗ್ರಹ ಅಭಿಯಾನ ಯಶಸ್ವಿ ಆಗುತ್ತದೆ ಎಂಬ ನಂಬಿಕೆ ನಮಗಿದೆ. ಪರಸ್ಪರರ ಸಹಾಯಕ್ಕೆ ದೇಶದ ಜನರು ಮುಂದೆ ಬರುತ್ತಾರೆ ಎಂಬ ನಂಬಿಕೆ ಇದೆ ಎಂದು ವಿರಾಟ್ ಕೊಯ್ಲಿ ಹೇಳಿದ್ದಾರೆ.

ಮೇ 1ರಂದು ಅನುಷ್ಕಾ ಶರ್ಮಾ ಅವರ ಜನ್ಮದಿನ. ಆದರೆ ಈ ಬಾರಿ ಕೊರೊನಾ ವೈರಸ್‍ನಿಂದ ದೇಶವೇ ಕಷ್ಟದಲ್ಲಿರುವ ಕಾರಣ ಅವರು ಯಾವುದೇ ಸಂಭ್ರಮಾಚರಣೆ ಮಾಡಿಕೊಳ್ಳಲಿಲ್ಲ. ನಿಮ್ಮೆಲ್ಲರಿಂದಾಗಿ ಈ ದಿನ ನನಗೆ ನಿಜಕ್ಕೂ ಸ್ಪೆಷಲ್ ಎನಿಸಿದೆ. ಆದರೆ ಈ ಕಷ್ಟದ ಪರಿಸ್ಥಿತಿಯಲ್ಲಿ ಸಂಭ್ರಮಾಚರಣೆ ಮಾಡುವುದು ಸರಿಯಲ್ಲ ಎಂದು ನನಗೆ ಅನಿಸಿತು. ನೀವು ಮಾಡಿದ ಎಲ್ಲ ಮೆಸೇಜ್ ನೋಡಿದ್ದೇನೆ. ಅದೇ ರೀತಿ ನಿಮಗಾಗಿ ನನ್ನ ಕಡೆಯಿಂದ ಒಂದು ಮುಖ್ಯವಾದ ಮೆಸೇಜ್ ಇದೆ. ಈ ಪರಿಸ್ಥಿತಿಯಲ್ಲಿ ನಾವೆಲ್ಲರೂ ಜೊತೆಯಾಗಿದ್ದು ದೇಶಕ್ಕೆ ಬೆಂಬಲ ನೀಡಬೇಕು ಎಂದು ಅನುಷ್ಕಾ ಹೇಳಿದ್ದರು.

ನಾನು ಮತ್ತು ವಿರಾಟ್ ನಮ್ಮ ಪಾಲಿನ ಕೆಲಸ ಮಾಡುತ್ತಿದ್ದೇವೆ. ಆ ಬಗ್ಗೆ ಶೀಘ್ರದಲ್ಲೇ ಮಾಹಿತಿ ನೀಡುತ್ತೇನೆ. ನೀವು ಕೂಡ ಈ ಅಭಿಯಾನದಲ್ಲಿ ಭಾಗಿ ಆಗಬಹುದು. ಈ ಸಂದರ್ಭದಲ್ಲಿ ನಾವೆಲ್ಲ ಒಂದಾಗಿದ್ದೇವೆ ಎಂಬುದು ನೆನಪಿರಲಿ. ಎಲ್ಲರೂ ಸುರಕ್ಷಿತವಾಗಿರಿ. ನಿಮ್ಮ ಕಾಳಜಿವಹಿಸಿ ಎಂದು ಅನುಷ್ಕಾ ಹೇಳಿದ್ದರು. ಕೊಟ್ಟ ಮಾತಿಗೆ ತಕ್ಕಂತೆಯೇ ಇಂದು ನಿಧಿ ಸಂಗ್ರಹ ಕಾರ್ಯಕ್ಕೆ ಚಾಲನೆ ನೀಡಿ, 2 ಕೋಟಿ ರೂ.ಗಳನ್ನು ದೇಣಿಗೆಯಾಗಿ ನೀಡಿದ್ದಾರೆ.

- Advertisement -

Related news

error: Content is protected !!