- Advertisement -
- Advertisement -
ವಿಟ್ಲ: ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕ ಶ್ರೀ ಕೃಷ್ಣ ಶಾಖೆ ಪೆರುವಾಯಿ
ಹಾಗೂ ಹಿಂದೂ ಹೃದಯ ಸಂಗಮ ಜನಸೇವಾ ಕೇಂದ್ರ ಪೆರುವಾಯಿ ಇದರ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಆದಿತ್ಯವಾರ ನಡೆಯಿತು.
ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆ ತನಕ ಪೆರುವಾಯಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಬಸ್ಸುತಂಗುದಾಣವನ್ನು ಶುಚಿ ಮಾಡಲಾಯಿತು ಹಾಗೂ ಮುಖ್ಯ ರಸ್ತೆಗೆ ಅಡ್ಡಲಾಗಿ ಬಂದು ಲಘು ಹಾಗೂ ಘನ ವಾಹನ ಸಂಚಾರಕ್ಕೆ ಹಾಗೂ ವಿದ್ಯುತ್ ತಂತಿಗೆ ತಾಗಿ ಪವರ್ ವಿತರಣೆಗೆ ತೊಂದರೆಯಾಗುತ್ತಿದ್ದ ಮರದ ಗೆಲ್ಲುಗಳನ್ನು ಕಡಿದು ಹಾಕಲಾಯಿತು. ರಸ್ತೆಯುದ್ದಕ್ಕೂ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳಲಾಯಿತು.
ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ 30 ಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಂಡರು.
- Advertisement -