- Advertisement -
- Advertisement -


ಮಧೂರು: ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಾಲಯದ ಅಷ್ಟಬಂಧ ಬ್ರಹ್ಮಕಲಶ-ಮೂಡಪ್ಪ ಸೇವಾ ಉತ್ಸವದ ನಿಮಿತ್ತ ಶ್ರೀ ಕ್ಷೇತ್ರಕ್ಕೆ ಉಪಮುಖ್ಯಮಂತ್ರಿ, ಜಲಸಂಪನ್ಮೂಲ ಮತ್ತು ಬೆಂಗಳೂರು ಅಭಿವೃದ್ಧಿ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಪತ್ನಿ ಸಮೇತ ದೇಗುಲಕ್ಕೆ ಭೇಟಿ ನೀಡಿದರು ದೇವಳದ ಆಡಳಿತ ಮಂಡಳಿಯವರು ವಾದ್ಯ ಘೋಷಗಳೊಂದಿಗೆ ಅವರನ್ನು ಕ್ಷೇತ್ರಕ್ಕೆ ಬರಮಾಡಿಕೊಂಡರು.
ಶ್ರೀ ಕ್ಷೇತ್ರದಲ್ಲಿ ಡಿ.ಕೆ.ಶಿವಕುಮಾರ್ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಪತ್ನಿ ಸಹಿತ ಡಿ.ಕೆ.ಶಿವ ಕುಮಾರ್ ಅವರಿಗೆ ಮಾಣಿಲ ಶ್ರೀಧಾಮದ ಪರಮಪೂಜ್ಯ ಶ್ರೀ ಯೋಗಿ ಕೌಸ್ತುಭ ಮೋಹನದಾಸ ಪರಮಹಂಸ ಸ್ವಾಮೀಜಿ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.
- Advertisement -








