- Advertisement -
- Advertisement -





ವಿಟ್ಲ: ವಿಟ್ಠಲ ಎಜುಕೇಶನ್ ಸೊಸೈಟಿ ಇದರ ಆಶ್ರಯದಲ್ಲಿ ನಿವೃತ್ತ ಉಪನ್ಯಾಸಕ ಉಂಡೆಮನೆ ಎಂ ವಿಶ್ವೇಶ್ವರ ಭಟ್ಟರವರ ಕೃತಿ “ಪುಟ್ಟ ಭಾರತ” ಇದರ ಬಿಡುಗಡೆ ಕಾರ್ಯಕ್ರಮ ಸುವರ್ಣ ರಂಗ ಮಂದಿರದಲ್ಲಿ ನಡೆಯಿತು.

ವಿಟ್ಠಲ ಎಜುಕೇಶನ್ ಸೊಸೈಟಿ ಸಂಚಾಲಕ ರಾಧಾಕೃಷ್ಣ ನಾಯಕ್ ಕೃತಿಯನ್ನು ಬಿಡುಗಡೆಗೊಳಿಸಿದರು. ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಸುಬ್ರಾಯ ಪೈ, ಕಾರ್ಯದರ್ಶಿ ಶಂಕರನಾರಾಯಣ ಪ್ರಸಾದ್, ಕೋಶಾಧಿಕಾರಿ ಬಾಬು ಕೊಪ್ಪಳ ಸದಸ್ಯರಾದ ರವಿಪ್ರಕಾಶ್, ಪದ್ಮಯ್ಯ ಗೌಡ, ಸದಾಶಿವ ಬನ, ಐಟಿಐ ಸಂಚಾಲಕ ಅಲ್ಫಾನ್ಸ್ ಸಿಲ್ವೆಸ್ಟರ್ ಮಸ್ಕರೇನಸ್, ಪ್ರಾಂಶುಪಾಲ ರಮೇಶ್ ರೈ ಉಪಸ್ಥಿತರಿದ್ದರು.

ಅಣ್ಣಪ್ಪ ಸಾಸ್ತಾನ ಸ್ವಾಗತಿಸಿದರು. ಲೇಖಕ ವಿಶ್ವೇಶ್ವರ ಬಟ್ ಪುಸ್ತಕದ ಮಾಹಿತಿ ನೀಡಿದರು. ಕಿರಣ್ ಕುಮಾರ್ ಬ್ರಹ್ಮಾವರ ವಂದಿಸಿದರು. ಶ್ರೀಹರಿ ಕಾರ್ಯಕ್ರಮ ನಿರೂಪಿಸಿದರು.

- Advertisement -








