Saturday, April 27, 2024
spot_imgspot_img
spot_imgspot_img

ವಿಟ್ಲ: ಇಡ್ಕಿದು ಸೇವಾ ಸಹಕಾರಿ‌ ಸಂಘದ ಅತ್ಯುತ್ತಮ ಸಾಧನೆಗಾಗಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಪ್ರಶಸ್ತಿ

- Advertisement -G L Acharya panikkar
- Advertisement -

ವಿಟ್ಲ: ಇಡ್ಕಿದು‌ ಸೇವಾ ಸಹಕಾರಿ ಸಂಘದ 2021 -22ನೇ ಸಾಲಿನ ಸಾಧನೆಗಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ|ಎಂ.ಎನ್.ರಾಜೇಂದ್ರ ಕುಮಾರ್ ಮತ್ತು ಆಡಳಿತ ಮಂಡಳಿಯ ಸದಸ್ಯರು ಪ್ರಶಸ್ತಿ ನೀಡಿ ಗೌರವಿಸಿದರು.

ಸಂಘದ ಅಧ್ಯಕ್ಷ ಸುಧಾಕರ ಶೆಟ್ಟಿ ಬೀಡಿನಮಜಲು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಈಶ್ವರ ನಾಯ್ಕ್ ರವರು ಪ್ರಶಸ್ತಿಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೆಶಕರಾದ ಟಿ.ಜಿ‌. ರಾಜಾರಾಮ್ ಭಟ್, ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್‌.ಬಿ. ಜಯರಾಮ ರೈ ಬಳಜ್ಜ, ದೇವಿಪ್ರಸಾದ್ ಶೆಟ್ಟಿ ಸಹಿತ ಹಲವರು ಉಪಸ್ಥಿತರಿದ್ದರು. ಕಳೆದ 13ವರ್ಷಗಳಿಂದ ಇಡ್ಕಿದು‌ ಸೇವಾ ಸಹಕಾರಿ ಸಂಘದ ಸಾಧನೆಗಾಗಿ ಕರ್ನಾಟಕ ರಾಜ್ಯ ಅಫೆಕ್ಸ್ ಬ್ಯಾಂಕಿನ ಪ್ರಶಸ್ತಿಗಳು ಹಾಗೂ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಹಲವು ಪ್ರಶಸ್ತಿಗಳು ಲಭಿಸಿದೆ.

- Advertisement -

Related news

error: Content is protected !!