- Advertisement -
- Advertisement -
ವಿಟ್ಲ: ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಮಸೀದಿ ಬಳಿ ನಾಲ್ಕು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ.
ಈ ಘಟನೆಯಲ್ಲಿ ನಾಲ್ಕು ವಾಹನಗಳು ನಜ್ಜು ಗುಜ್ಜಾಗಿದೆ. ಜೀಪು ಚಾಲಕ ರಾಂಗ್ ಸೈಡ್ ನಿಂದ ಬಂದಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ಪ್ರತ್ಯಕ್ಷಿದರ್ಶಿಗಳು ತಿಳಿಸಿದ್ದಾರೆ.
ಪುತ್ತೂರು ಕಡೆಯಿಂದ ಮಾಣಿ ಕಡೆಗೆ ಜೀಪು ಮತ್ತು ಮಂಗಳೂರು ಕಡೆಯಿಂದ ಪುತ್ತೂರಿಗೆ ತೆರಳುತ್ತಿದ್ದ ಆಲ್ಟೋ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಜೀಪಿನ ಹಿಂದಿನಿಂದ ಬರುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಜೀಪಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಬೈಕ್ ಸವಾರ ಗಾಯಗೊಂಡಿದ್ದಾನೆ. ಕಾರಿನ ಹಿಂದಿನಿಂದ ಬರುತ್ತಿದ್ದ ಆಕ್ಟೀವಾ ಕಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಸಹ ಸವಾರ ಬಾಲಕ ಸಣ್ಣಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾನೆ. ಬೈಕ್ ಸವಾರನನ್ನು ಪುತ್ತೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕೆಲವು ಹೊತ್ತು ವಾಹನ ಸಂಚಾರದಲ್ಲಿ ಅಸ್ತವ್ಯಸ್ತಗೊಂಡಿದ್ದು, ಪೊಲೀಸರು ಸ್ಥಳಕ್ಕೆ ಬಂದು ವಾಹನ ಸಂಚಾರ ಸುಗಮಗೊಳಿಸಿದರು.
- Advertisement -