Saturday, June 28, 2025
spot_imgspot_img
spot_imgspot_img

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ; ಆರೋಪಿಯನ್ನು ಶೀಘ್ರವೇ ಬಂಧಿಸುವುದಾಗಿ ಠಾಣಾಧಿಕಾರಿಯಿಂದ ಭರವಸೆ..!

- Advertisement -
- Advertisement -

ವಿಟ್ಲ: ಕುದ್ದುಪದವಿನಲ್ಲಿ ನಡೆದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ವ್ಯಕ್ತಿಯನ್ನು ಶೀಘ್ರವೇ ಬಂಧಿಸಲಾಗುವುದೆಂದು ವಿಟ್ಲ ಠಾಣಾಧಿಕಾರಿಯವರು ಭರವಸೆ ನೀಡಿದ್ದಾರೆಂದು ಠಾಣೆಗೆ ಭೇಟಿ ನೀಡಿದ ಪುತ್ತೂರು ಮಂಡಲ ಬಿಜೆಪಿ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್ ಮತ್ತು ವಿಟ್ಲ ಮುಡ್ನೂರು ಪಂಚಾಯತ್‌ ಅಧ್ಯಕ್ಷ ಪುನೀತ್ ಮಾಡತ್ತಾರ್‌ವರಿಗೆ ತಿಳಿಸಿದ್ದಾರೆ.

ಸಮಾಜದಲ್ಲಿ ಸಣ್ಣ ಹೆಣ್ಣು ಮಕ್ಕಳ ಮೇಲೆ ನಡೆಯುವ ದೌರ್ಜನ್ಯವನ್ನು ಕ್ಷಮಿಸುವ ಮಾತೇ ಇಲ್ಲ. ಆರೋಪಿಯನ್ನು ಶೀಘ್ರವೇ ಬಂಧಿಸಿ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳದ ರೀತಿಯಲ್ಲಿ ನಮ್ಮ ಪ್ರಯತ್ನವನ್ನು ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆಂದು ತಿಳಿಸಿದ್ದಾರೆ.

- Advertisement -

Related news

error: Content is protected !!