Tuesday, May 14, 2024
spot_imgspot_img
spot_imgspot_img

ವಿಟ್ಲ: ರಿಕ್ಷಾಕ್ಕೆ ಅಡ್ಡ ಬಂದ ದನ; ರಿಕ್ಷಾ ಮಗುಚಿ ಬಿದ್ದು 50ಲೀಟರ್ ಹಾಲು ನಷ್ಟ..!!

- Advertisement -G L Acharya panikkar
- Advertisement -

ವಿಟ್ಲ: ಸಾರಡ್ಕ-ಪುಣಚ ರಸ್ತೆಯ ತೋರಣಕಟ್ಟೆಯ ಸೊಸೈಟಿಯ ಸಮೀಪ ರಿಕ್ಷಾಕ್ಕೆ ದನ ಅಡ್ಡ ಬಂದ ಹಿನ್ನಲೆ ರಿಕ್ಷಾವೊಂದು ಮಗುಚಿ ಬಿದ್ದು ಜಖಂಗೊಂಡ ಘಟನೆ ನಡೆದಿದೆ.

ಆಜೇರು ನಿವಾಸಿ ಶಾಂತಾರಾಮ ರಾವ್ ಅವರು ರಿಕ್ಷಾದಲ್ಲಿ ಮಂಗಳವಾರ ಬೆಳಗ್ಗೆ ತೋರಣಕಟ್ಟೆಯಿಂದ ಪರಿಯಲ್ತಡ್ಕಕ್ಕೆ ಹಾಲು ಸಾಗಾಟ ಮಾಡುತ್ತಿದ್ದ ಸಂದರ್ಭ ಘಟನೆ ನಡೆದಿದೆ.

ಘಟನೆಯಿಂದ ರಿಕ್ಷಾದಲ್ಲಿ ಇದ್ದ ಸುಮಾರು 50ಲೀಟರ್ ಹಾಲು ರಸ್ತೆಗೆ ಚೆಲ್ಲಲ್ಪಟ್ಟಿದೆ. ರಿಕ್ಷಾ ಚಾಲನೆ ಮಾಡುತ್ತಿದ್ದ ಶಾಂತಾರಾಮ ಅವರು ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಇಳಿಜಾರು ಪ್ರದೇಶದಲ್ಲಿ ರಸ್ತೆಗೆ ಏಕಾಏಕಿ ದನ ಅಡ್ಡ ಬಂದಿದ್ದು, ತಪ್ಪಿಸಲು ಹೋಗುವ ಸಂದರ್ಭ ರಿಕ್ಷಾ ರಸ್ತೆಯ ಪಕ್ಕಕ್ಕೆ ಮಗುಚಿದೆ ಎಂದು ಹೇಳಲಾಗಿದೆ.

- Advertisement -

Related news

error: Content is protected !!