- Advertisement -
- Advertisement -
ವಿಟ್ಲ: 20 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿರುವ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು ಕೇರಳದ ಎರುವತ್ತೂರು ನಿವಾಸಿ ನೌಷದ್ ಯಾನೆ ಹಂಸದ್ ಎನ್ನಲಾಗಿದೆ.
ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2 ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ 20 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದನು. ಆರೋಪಿಯನ್ನು ಕೇರಳ ರಾಜ್ಯದ ಕ್ಯಾಲಿಕಟ್, ಪೇರಾಂಬರ ಎಂಬಲ್ಲಿ ಸ್ಥಳೀಯ ಠಾಣಾ ಪೊಲೀಸರ ಸಹಕಾರದಿಂದ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ವಿಟ್ಲ ಠಾಣಾ ASI ಜಯರಾಮ, HC ದಿನೇಶ್, PC ಪುನೀತ್ ಮತ್ತು ವಿಠಲ ಎಂಬವರು ಪಾಲ್ಗೊಂಡಿದ್ದರು.
- Advertisement -