- Advertisement -
- Advertisement -
ವಿಟ್ಲ: ಹಾಡಹಗಲೇ ಗೋವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಘಟನೆ ವರದಿಯಾಗಿದೆ. ಕೋಡಾಜೆಯಿಂದ ಸುರಿಬೈಲ್ಗೆ ಎರಡು ದನಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಿಷಯ ತಿಳಿದ ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಇದರ ಕಾರ್ಯಕರ್ತರು ವಾಹನವನ್ನು ತಡೆದು ಪೊಲೀಸರಿಗೊಪ್ಪಿಸಿದ್ದಾರೆ.
ಅಶ್ರಫ್ ಸುರಿಬೈಲ್ ಬೋಳಂತೂರು ಎಂಬವ ಸಾಗಾಟ ಮಾಡುತ್ತಿದ್ದು ವೀರಕಂಬ ಗ್ರಾಮದ ಕೊಂಬಿಲ ಎಂಬಲ್ಲಿ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ವಾಹನವನ್ನು ಅಡ್ಡಗಟ್ಟಿ ತಡೆದಿದ್ದಾರೆ. ನಂತರ ವಿಟ್ಲ ಪೊಲೀಸರಿಗೆ ಒಪ್ಪಿಸಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
- Advertisement -