Wednesday, May 8, 2024
spot_imgspot_img
spot_imgspot_img

ವಿಟ್ಲ: ಜೇಸಿಐ ವಿಟ್ಲ ವತಿಯಿಂದ ವಿನೂತನ ಕಾರ್ಯಕ್ರಮ; ಪರೀಕ್ಷಾ ಸಿದ್ಧತೆಯಲ್ಲಿ ಶಿಕ್ಷಕರ ಪಾತ್ರ; ’ಪರೀಕ್ಷೆ ಒಂದು ಹಬ್ಬ ಸಂಭ್ರಮಿಸಿ’

- Advertisement -G L Acharya panikkar
- Advertisement -

ವಿಟ್ಲ: ಜೇಸಿಐ ವಿಟ್ಲ ವತಿಯಿಂದ ವಿನೂತನ ಕಾರ್ಯಕ್ರಮವು ಜ. 8ರಂದು ಬೆಳಿಗ್ಗೆ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ.
ಈ ತರಬೇತಿ ಕಾರ್ಯಕ್ರಮದಲ್ಲಿ ಪರೀಕ್ಷೆ ಒಂದು ಹಬ್ಬ ಸಂಭ್ರಮಿಸಿ ಮತ್ತು ಪರೀಕ್ಷಾ ಸಿದ್ಧತೆಯಲ್ಲಿ ಶಿಕ್ಷಕರ ಪಾತ್ರ ಕಾರ್ಯಕ್ರಮವು ನಡೆಯಲಿದೆ. ಪರೀಕ್ಷೆ ಒಂದು ಹಬ್ಬ ಸಂಭ್ರಮಿಸಿ ಕಾರ್ಯಕ್ರಮವನ್ನು ವಲಯ 15 ವಲಯಾಧ್ಯಕ್ಷರು Jc Adv. ಗಿರೀಶ್ ಎಸ್.ಪಿ ಉದ್ಘಾಟಿಸಲಿದ್ದಾರೆ.

ಅಧ್ಯಕ್ಷತೆಯನ್ನು ಸಂತೋಷ್ ಶೆಟ್ಟಿ ಪೆಲತಡ್ಕ ವಹಿಸಲಿದ್ದಾರೆ. ಸಂಪನ್ಮೂಲ ವ್ಯಕ್ತಿಯಾಗಿ ’ಪರಿವರ್ತನಾ’ ವಿದ್ಯಾಸಂಸ್ಥೆ, ಶ್ರೀರಂಗಪಟ್ಟಣ ಅಂತರಾಷ್ಟ್ರೀಯ ತರಬೇತುದಾರರಾದ ಚೇತನ್‌ರಾಮ್ ಎ.ಆರ್. ಭಾಗವಹಿಸಲಿದ್ದಾರೆ. ವಿಟ್ಲ ವಿಠಲ ಪದವಿ ಪೂರ್ವ ಕಾಲೆಜಿನ ಪ್ರಾಂಶುಪಾಲರಾದ ಆದರ್ಶ ಚೊಕ್ಕಾಡಿ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಜ.8 ರಂದು ಮಧ್ಯಾಹ್ನ 2 ಗಂಟೆಗೆ ನಡೆಯುವ ಪರೀಕ್ಷಾ ಸಿದ್ಧತೆಯಲ್ಲಿ ಶಿಕ್ಷಕರ ಪಾತ್ರ ಕಾರ್ಯಕ್ರಮವು ಜೇಸೀ ಪೆವಿಲಿಯನ್ ವಿಟ್ಲ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆ, ವಿಟ್ಲ ಇಲ್ಲಿ ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ ಭಾಗವಹಿಸಲಿದ್ದಾರೆ. ಪರಿವರ್ತನಾ ವಿದ್ಯಾಸಂಸ್ಥೆ ಶ್ರೀರಂಗಪಟ್ಟಣ ಅಂತರಾಷ್ಟ್ರೀಯ ತರಬೇತುದಾರರಾದ ಚೇತನ್‌ರಾಮ್ ಎ.ಆರ್‍ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ. ವಿಟ್ಲ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ಜಯರಾಮ ರೈ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಸುಮಾರು 750puc ಮಕ್ಕಳಿಗೆ ತರಬೇತಿ ಕಾರ್ಯಕ್ರಮ, ಮದ್ಯಾಹ್ನ ಮೇಲೆ ಸುಮಾರು 200ರಿಂದ 300 ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!