Tuesday, July 1, 2025
spot_imgspot_img
spot_imgspot_img

ವಿಟ್ಲ: ವಿಠಲ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಾರ್ಷಿಕೋತ್ಸವ

- Advertisement -
- Advertisement -

ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಾರ್ಷಿಕೋತ್ಸವ ಸಮಾರಂಭ ನಡೆಯಿತು.

ವಿಠಲ ಎಜುಕೇಶನ್ ಸೊಸೈಟಿಯ ಉಪಾಧ್ಯಕ್ಷ ಅಲ್ಫಾನ್ಸ್ ಸಿಲ್ವೆಸ್ಟರ್ ಮಸ್ಕರೇನ್ಹಸ್ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಸಂಸ್ಥೆಯ ಗೌರವಾಧ್ಯಕ್ಷ ಬಂಗಾರು ಅರಸರು ವಾರ್ಷಿಕೋತ್ಸವದ ಉದ್ಘಾಟನೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ

ಕಾರ್ಯಕ್ರಮದಲ್ಲಿ ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕ ವಿ.ಕೆ. ವಿಟ್ಲರವರು ಮಾತನಾಡಿ ಪ್ರಯತ್ನವೇ ಯಶಸ್ಸಿನ ಕೀಲಿಗೈ – ವಿಕೆ ವಿಟ್ಲ ಯಾವುದೇ ವಿದ್ಯಾರ್ಥಿಯು ಸೋಲಿನಿಂದ ಎದೆಗುಂದಬಾರದು ಸೋಲೆಂಬುದನ್ನು ಗೆಲುವಿಗೆ ಮೆಟ್ಟಿಲಾಗಿಸಿಕೊಳ್ಳಬೇಕು, ಆಗ ಜೀವನದಲ್ಲಿ ಯಶಸ್ಸನ್ನು ಕಾಣಬಹುದು ಎಂದು ನುಡಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಡಾ.ಸುಧಾ ಚಂದ್ರಶೇಖರ ಶೆಟ್ಟಿ ಮಾತನಾಡಿ ಪ್ರತಿ ವಿದ್ಯಾರ್ಥಿಯು ಕಲಿತ ಶಾಲೆಯನ್ನು, ಕಲಿಸಿದ ಗುರುಗಳನ್ನು ಮರೆಯಬಾರದು ಅಲ್ಲದೆ ತಾನು ಕಲಿತ ಶಾಲೆಗೆ ತನ್ನ ಕೈಲಾದ ಸಹಾಯವನ್ನು ಮಾಡುತ್ತಾ ಶಾಲೆಯ ಋಣವನ್ನು ತೀರಿಸಲು ಪ್ರಯತ್ನಿಸಬೇಕು, ಹಿರಿಯರೆಲ್ಲರಿಗೂ ಗೌರವವನ್ನು ನೀಡುತ್ತಾ ಗುರು ಋಣವನ್ನು ತೀರಿಸಲು ಪ್ರಯತ್ನಿಸಬೇಕು ಎಂದರು.

ವೇದಿಕೆಯಲ್ಲಿ ಸಂಸ್ಥೆಯ ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್, ಪ್ರಾಂಶುಪಾಲ ಆದರ್ಶ ಚೊಕ್ಕಾಡಿ, ಉಪಪ್ರಾಂಶುಪಾಲ ಕಿರಣ್ ಕುಮಾರ್, ಎಜುಕೇಶನ್ ಸೊಸೈಟಿ ಕೋಶಾಧಿಕಾರಿ ಬಾಬು ಕೊಪ್ಪಳ, ಸದಸ್ಯರಾದ ನಿತ್ಯಾನಂದ ನಾಯಕ್, ಸದಾಶಿವ ಬನ, ಆಡಳಿತಾಧಿಕಾರಿ ಪ್ರಶಾಂತ್ ಚೊಕ್ಕಾಡಿ, ಐಟಿಐ ಪ್ರಾಂಶುಪಾಲ ರಮೇಶ್ ರೈ, ನಿವೃತ್ತ ಉಪ ಪ್ರಾಂಶುಪಾಲ ಸುಬ್ರಹ್ಮಣ್ಯ ಭಟ್ ಉಪಸ್ಥಿತರಿದ್ದರು. ಹಿರಿಯ ಶಿಕ್ಷಕ ಶಂಕರ್ ನಾರಾಯಣ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

- Advertisement -

Related news

error: Content is protected !!