ವಿಟ್ಲ: ಚಂದಳಿಕೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮವನ್ನು ಚಂದಳಿಕೆ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಭವಾನಿ ರೈ ಕೊಲ್ಯ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ನಿವೃತ್ತ ಶಿಕ್ಷಕ ನಾರಾಯಣಗೌಡ, ಯಕ್ಷ ಭಾರತ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಸಂಜೀವ ಪೂಜಾರಿ ಆಟಿದ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷೆ ಸುಮತಿ ದೇಜಪ್ಪ, ಚಂದಳಿಕೆ ವಿದ್ಯಾವರ್ಧಕ ಸಂಘದ ಸದಸ್ಯೆ ತೆರೇಸಾ, ಮುಖ್ಯೋಪಾಧ್ಯಾಯರಾದ ವಿಶ್ವನಾಥಗೌಡ ಕುಳಾಲು, ದೈಹಿಕ ಶಿಕ್ಷಕ ಸುರೇಶ್ ಶೆಟ್ಟಿ ಕೇಪು, ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು, ಶಿಕ್ಷಕೃಂದದವರು ಉಪಸ್ಥಿತರಿದ್ದರು.
ಆಟಿ ಕಾರ್ಯಕ್ರಮದ ಬಗ್ಗೆ ಭಾಷಣ, ಹಾಡು, ನೃತ್ಯಗಳು ಮಕ್ಕಳಿಂದ ಪ್ರದರ್ಶನಗೊಂಡವು. ಆಟಿಗೆ ಸಂಬಂಧಿಸಿದ ಪತ್ರೊಡೆ, ಹಲಸಿನ ಸೋಲೆ ಪಲ್ಯ, ತಿಮರೆ ಚಟ್ನಿ ಹಾಗೂ ಪಾಯಸದೊಂದಿಗೆ ವಿವಿಧ ಖಾದ್ಯಗಳನ್ನು ತಯಾರಿಸಿ ವಿತರಿಸಲಾಯಿತು. ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
Insta: glacharyajewellers
Fb: glacharya