Sunday, May 19, 2024
spot_imgspot_img
spot_imgspot_img

ವಿಟ್ಲ: ಹಳೇ ವೈಷಮ್ಯದ ಹಿನ್ನಲೆ ಕಾರು ಅಡ್ಡಗಟ್ಟಿ ಹಲ್ಲೆಗೈದು ಜೀವಬೆದರಿಕೆ.! ದೂರು ದಾಖಲು

- Advertisement -G L Acharya panikkar
- Advertisement -
vtv vitla

ವಿಟ್ಲ: ಹಳೆಯ ದ್ವೇಷದಿಂದ ಕಾರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ ಬಳಿಕ ಜೀವ ಬೆದರಿಕೆ ಹಾಕಿದ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ.

ವಿಟ್ಲ ಮುಡ್ನೂರು ಗ್ರಾಮದ ಕಂಬಳಬೆಟ್ಟು ಎಂಬಲ್ಲಿ ದರ್ಗಾದ ಬಳಿ ಕಾರಿನಲ್ಲಿ ಹೋಗುತ್ತಿದ್ದ ಮಹಮ್ಮದ್ ಸರ್ವನ್ ಮತ್ತು ಫಾರೂಕ್ ಎಂಬವರನ್ನು ಐದು ಮಂದಿಯ ತಂಡವೊಂದು ಬೈಕಿನಲ್ಲಿ ಬಂದು ಅಡ್ಡಕಟ್ಟಿ ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿದ್ದಾರೆ.

ಕಂಬಳಬೆಟ್ಟು ಉರಿಮಜಲು ನಿವಾಸಿಗಳಾದ ಜಸೀಲ್, ಇಸುಬು, ಜಿಯಾದ್, ಉಸ್ಮಾನ್, ಶರೀಫ್ ಹಾಗೂ ಇತರರು ಸೇರಿಕೊಂಡು ಬೈಕಿನಲ್ಲಿ ಬಂದು ಕಾರಿನಲ್ಲಿ ಹೋಗುತ್ತಿದ್ದ ಸರ್ವಾನ್ ಮತ್ತು ಫಾರೂಕ್ ಅವರಿಗೆ ಅಡ್ಡಗಟ್ಟಿ ಕಾರಿನಿಂದ ಹೊರಗಡೆ ಎಳೆದು ಹಲ್ಲೆ ನಡೆಸಿದ್ದಾರೆ ಮತ್ತೆ ಇವರ ಮೇಲೆ ಹಲ್ಲೆ ನಡೆಸುವುದನ್ನು ತಡೆ ಬಂದ ಸ್ಥಳೀಯರಿಗೆ ಜೀವಬೆದರಿಕೆ ಹಾಕಿದ್ದಾರೆ ಎಂಬ ವಿಟ್ಲ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

Related news

error: Content is protected !!