Monday, April 29, 2024
spot_imgspot_img
spot_imgspot_img

ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ದೇವರ ಬಾಲಾಲಯ ಪ್ರತಿಷ್ಠೆ ಕಾರ್ಯಕ್ರಮ

- Advertisement -G L Acharya panikkar
- Advertisement -

ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಶ್ರೀ ಅಯ್ಯಪ್ಪ ಸ್ವಾಮಿ ದೇವರ ಬಾಲಾಲಯ ಪ್ರತಿಷ್ಠೆ ಕಾರ್ಯಕ್ರಮವು ನ.24 ರಂದು ಕುಂಟುಕುಡೇಲು ಬ್ರಹ್ಮಶ್ರೀ ವೇ.ಮೂ. ಶ್ರೀ ರಘುರಾಮ ತಂತ್ರಿಗಳ ನೇತೃತ್ವದಲ್ಲಿ ಜರಗಲಿರುವುದು.

ಬೆಳಿಗ್ಗೆ ೯.೩೦ಕ್ಕೆ ಗಣಪತಿ ಹೋಮ, ಶ್ರೀ ದೇವರ ಅನುಜ್ಞಾ ಕಲಶ ಬಳಿಕ ಶ್ರೀ ದೇವರ ಪ್ರತಿಷ್ಠೆ, ಜೀವಕಲಶಾಭಿಷೇಕ, ಪ್ರತಿಷ್ಠಾ ಕಲಶಾಭಿಷೇಕ ನಡೆಯಲಿದೆ.

ಬಳಿಕ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ, ಶ್ರೀಧಾಮ-ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಶ್ರೀ ಕ್ಷೇತ್ರ ಕಣಿಯೂರಿನ ಶ್ರೀ ಮಹಾಬಲೇಶ್ವರ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.

ವಿಟ್ಲ ಶ್ರೀ ಧನ್ವಂತರಿ ಕ್ಷೇತ್ರದ ಜ್ಯೋತಿಷ್ಯ ಕೇಶವ ಭಟ್, ಉದ್ಯಮಿ ದಿನಕರ ಭಟ್ ಮಾವೆ, ಸುಭಾಶ್ಚಂದ್ರ ನಾಯಕ್, ದೇವದಾಸ್ ಅಡ್ಯನಡ್ಕ, ರವಿ ಕಾರಂತ, ಲ|ಒ.ಎ ಕೃಷ್ಣ ಭಾರತ್ ಪೆಟ್ರೋಲಿಯಂ ವಿಟ್ಲ, ಸಂತೋಷ್ ಕುಮಾರ್ ಶೆಟ್ಟಿ ಪೆಲ್ತಡ್ಕ ಶೆಲ್ಟರ್ ಅಸೋಸಿಯೇಟ್ಸ್ ವಿಟ್ಲ, ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷ ಸಂದೇಶ್ ಬಿಕನಾಜೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!