- Advertisement -
- Advertisement -
ವಿಟ್ಲ: ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಘಟನೆ ನಡೆದಿದೆ. ಮೇಗಿನಪೇಟೆಯಲ್ಲಿ ಆಟೋ ರಿಕ್ಷಾದಲ್ಲಿ 25 kg ಯಷ್ಟು ದನದ ಮಾಂಸ ಸಾಗಾಟ ಮಾಡುತ್ತಿದ್ದ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.
ವಿಟ್ಲ ಠಾಣಾ ಪೊಲೀಸ್ ಇನ್ಸ್ಪೆಕ್ಟರ್ ಹೆಚ್ ಇ ನಾಗರಾಜ್ ಆದೇಶದ ಮೇರೆ ಪೊಲೀಸ್ ಸಬ್ಇನ್ಸ್ಪೆಕ್ಟರ್ ಸಂದೀಪ್ ಶೆಟ್ಟಿ ದಾಳಿ ನಡೆಸಿದ್ದಾರೆ. ಈ ವೇಳೆ ರಿಕ್ಷಾ ಚಾಲಕ ಪರಾರಿಯಾಗಿದ್ದಾನೆ.
ಪೊಲೀಸ್ ಇಲಾಖೆ ಅಕ್ರಮ ದನ ಸಾಗಾಟ, ಗೋಮಾಂಸ ಸಾಗಾಟದ ಮೇಲೆ ನಿಗಾ ಇರಿಸಿದ್ದು, ಹಲವು ಪ್ರಕರಣಗಳು ಈಗಾಗಲೇ ದಾಖಲಾಗಿದೆ.
- Advertisement -