- Advertisement -
- Advertisement -
ವಿಟ್ಲ: ಭಾರತೀಯ ಮಜ್ದೂರ್ ಸಂಘ ವಿಟ್ಲ ವತಿಯಿಂದ ವಿಟ್ಲ ಫಿರ್ಕಗೆ ಸಂಬಂಧಿಸಿದಂತೆ ಕಟ್ಟಡ ಕಾರ್ಮಿಕರ ಸಭೆಯನ್ನು ಜು.02ರಂದು ಬೆಳಿಗ್ಗೆ 10:30ಕ್ಕೆ ಸರಿಯಾಗಿ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬಳಿ ಇರುವ ಸಭಾಭವನದಲ್ಲಿ ಕರೆಯಲಾಗಿದೆ.
ಸಭೆಯಲ್ಲಿ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಿ ಬಳಿಕ ಕಟ್ಟಡ ಕಾರ್ಮಿಕರ ಸಮಸ್ಯೆಗಳ ಕುರಿತಾಗಿ ವ್ಯಾಪಕ ಚರ್ಚೆಗಳನ್ನು ನಡೆಸಲಾಗುವುದು. ಈ ಸಭೆಗೆ ಜಿಲ್ಲಾ ಮಟ್ಟದ ಬಿ.ಎಂ.ಎಸ್. ಮುಖಂಡರು ಭಾಗವಹಿಸಿ ಮಾರ್ಗದರ್ಶನ ಮಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -