- Advertisement -
- Advertisement -





ವಿಟ್ಲ: ಬೋಳಂತೂರು ನಾರ್ಶದಲ್ಲಿ ನಡೆದ ಸಿಂಗಾರಿ ಬೀಡಿ ಮಾಲೀಕರ ಮನೆಗೆ ಇ.ಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ದಾಳಿ ಮಾಡಿ, ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕೇರಳ ರಾಜ್ಯ ಕೊಲ್ಲಂ ಜಿಲ್ಲೆಯ ಶಬಿನ್ (27) ಎಂದು ಗುರುತಿಸಲಾಗಿದೆ.
ಆರೋಪಿ ಶಬಿನ್ ಎಂಬಾತನನ್ನು ಕೇರಳದ ತಿರುವನಂತಪುರಂ ವಿಮಾನ ನಿಲ್ದಾಣದಿಂದ ದಸ್ತಗಿರಿ ಮಾಡಿ ಕರೆದು ತಂದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಮಾನ್ಯ ನ್ಯಾಯಾಲಯದಿಂದ ಕಸ್ಟಡಿ ತೆಗೆದುಕೊಂಡು ತೀವ್ರ ವಿಚಾರಣೆ ನಡೆಸುತ್ತಿರುವುದಾಗಿ ತಿಳಿದುಬಂದಿದೆ.
- Advertisement -