Friday, May 3, 2024
spot_imgspot_img
spot_imgspot_img

ವಿಟ್ಲ: ಬಾಲವಿಕಾಸದಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

- Advertisement -G L Acharya panikkar
- Advertisement -

ವಿಟ್ಲ : ಇಲ್ಲಿನ ಪೆರಾಜೆ, ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಕ್ಟೋಬರ್ 2ರಂದು ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ದೀಪ ಪ್ರಜ್ವಲನದ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಾಲವಿಕಾಸ ಟ್ರಸ್ಟ್ ನ ಅಧ್ಯಕ್ಷ ಪ್ರಹ್ಲಾದ್ ಜೆ ಶೆಟ್ಟಿ, “ಮಹಾತ್ಮ ಎಂಬ ಬಿರುದು ಪಡೆದ ಏಕೈಕ ರಾಜಕೀಯ ನಾಯಕ ಮಹಾತ್ಮಾ ಗಾಂಧಿ, ಭಾರತದ ಸ್ವಾತಂತ್ರ್ಯಕ್ಕಾಗಿ ತನ್ನ ಜೀವನವನ್ನು ತ್ಯಾಗ ಮಾಡಿದ ಸರಳ ಜೀವಿ. ಭಾರತದ ಜವಾಬ್ದಾರಿಯುತ ನಾಗರಿಕರಾದ ನಾವು ಮಹಾತ್ಮಾ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ತತ್ವಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು” ಎಂದು ಹೇಳುವ ಮೂಲಕ ದಿನದ ಮಹತ್ವದ ಬಗ್ಗೆ ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಶಾಲೆಯ ಆಡಳಿತಾಧಿಕಾರಿಯಾದ ರವೀಂದ್ರ ದರ್ಬೆ, ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮಿ ವಿ. ಶೆಟ್ಟಿಯವರು ದಿನದ ಮಹತ್ವದ ಬಗ್ಗೆ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಅತಿಥಿ ಗಣ್ಯರು ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ದಿನದ ಮಹತ್ವವನ್ನು ವಿದ್ಯಾರ್ಥಿನಿಯರಾದ ಸ್ಪರ್ಶ ಎನ್ .ಜಿ ಹಾಗೂ ಪ್ರಗತಿ ತಿಳಿಸಿದರು. ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಸರ್ವಧರ್ಮ ಪ್ರಾರ್ಥನೆ ಸಲ್ಲಿಸಿದರು. ಈ ಕಾರ್ಯಕ್ರಮದಲ್ಲಿ ಶಾಲೆಯ ಬೋಧಕ – ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಕಾರ್ಯಕ್ರಮವನ್ನು ವಿದ್ಯಾರ್ಥಿನಿ ನಿವ್ಯ ರೈ ಸ್ವಾಗತಿಸಿ, ದಿಶಾ ವಂದಿಸಿದರು. ವೃದ್ಧಿ ಎ. ಕೊಂಡೆ ಮತ್ತು ಪ್ರೇಕ್ಷ ನಿರೂಪಿಸಿದರು.

- Advertisement -

Related news

error: Content is protected !!