ವಿಟ್ಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಧರ್ಮನಗರ ಇದರ ವತಿಯಿಂದ 50ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ಸೆ.10ರ ಶುಕ್ರವಾರದಂದು ಧರ್ಮನಗರದ ಸಮಾಜ ಮಂದಿರದಲ್ಲಿ ಜರಗಲಿರುವುದು. ಕೋವಿಡ್ ನಿಯಂತ್ರಣಕ್ಕೆ ಸರಕಾರ ನಿರ್ದೇಶಿಸಿರುವ ನಿಯಮಗಳನ್ನು ಪಾಲಿಸಿಕೊಂಡು ಈ ಕಾರ್ಯಕ್ರಮ ನಡೆಯಲಿದೆ.
ಹಿನ್ನಲೆ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರೇರಣೆಯಿಂದ ಗಣೇಶೋತ್ಸವವನ್ನು ಆಚರಿಸುತ್ತಾ ಬಂದಿದೆ. ಕಳೆದ 50 ವರ್ಷಗಳಿಂದ ವಿಭಿನ್ನವಾಗಿ ಗಣೇಶ ಚತುರ್ಥಿಯನ್ನು ಆಚರಿಸಿದ ಕೀರ್ತಿ ಧರ್ಮನಗರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಗೆ ಸಲ್ಲುತ್ತದೆ. 25ನೇ ವರ್ಷದ ಗಣೇಶೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗಿತ್ತು. ಭವ್ಯ ಮೆರವಣಿಗೆ ಮೂಲಕ ನಡೆಸಿದ ಗಣೇಶ ಮೂರ್ತಿಯ ವಿಸರ್ಜನೆಯನ್ನು ಇಂದಿಗೂ ಜನರು ನೆನಪಿಸಿಕೊಳ್ಳುತ್ತಾರೆ.
ಕಾರ್ಯಕ್ರಮಗಳ ವಿವರ ಈ ಕೆಳಗಿನಂತಿದೆ: .
ಬೆಳಿಗ್ಗೆ 7.00ಗಂಟೆಗೆ- ಗಣಪತಿ ಹವನ, ಬೆಳಿಗ್ಗೆ 8.00ಗಂಟೆಗೆ- ಧ್ವಜಾರೋಹಣ ಹಾಗೂ ಮೂರ್ತಿ ಪ್ರತಿಷ್ಠೆ, ಬೆಳಿಗ್ಗೆ 8.15ಕ್ಕೆ- ಉದ್ಘಾಟನೆ, ಬೆಳಿಗ್ಗೆ 9.00ಕ್ಕೆ-ಕುಣಿತ ಭಜನೆ, ಬೆಳಿಗ್ಗೆ 11.00ಕ್ಕೆ- ಕನಕಾಭಿಷೇಕ, ಮಧ್ಯಾಹ್ನ 12.30ಕ್ಕೆ- ಮಹಾಪೂಜೆ, ಮಧ್ಯಾಹ್ನ 1:00ಕ್ಕೆ ಪ್ರಸಾದ ಭೋಜನ, ಅಪರಾಹ್ನ 2:00ಗಂಟೆಗೆ-ಭಜನೆ, ಸಂಜೆ 5:00ಕ್ಕೆ- ರಂಗಪೂಜೆ, ಸಂಜೆ 6:00ಕ್ಕೆ- ಮಹಾಮಂಗಳಾರತಿ, ಸಂಜೆ 6.30ಕ್ಕೆ-ವಂದೇ ಮಾತರಂ, ಮೂರ್ತಿ ವಿಸರ್ಜನೆ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.