- Advertisement -
- Advertisement -



ಪುತ್ತೂರು : ಹೃದಯಾಘಾತದಿಂದ ವಿಟ್ಲದಲ್ಲಿ ಕಾರ್ಯಾಚರಿಸುತ್ತಿರುವ ಈಫ ಮೊಬೈಲ್ ಶಾಪ್ ಮಾಲಕ ನಿಧನರಾದ ಬಗ್ಗೆ ತಿಳಿದು ಬಂದಿದೆ.
ಮೃತರನ್ನು ಪುರುಷರಕಟ್ಟೆ ನಿವಾಸಿ ಪ್ರಕಾಶ್ (45) ಎಂದು ಗುರುತಿಸಲಾಗಿದೆ.
ಪ್ರಕಾಶ್ ಅವರು ನರಿಮೊಗರು ವಲಯ ಕಾಂಗ್ರೆಸ್ ನ ಅಧ್ಯಕ್ಷರಾಗಿದ್ದು ಯಂಗ್ ಬ್ರಿಗೇಡ್ ನಲ್ಲಿ ಕೂಡ ತೊಡಗಿಸಿಕೊಂಡಿದ್ದರು. ಕ್ರಿಕೆಟ್ ಆಟಗಾರರಾಗಿದ್ದ ಪ್ರಕಾಶ್ ಪುತ್ತೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಮೊಬೈಲ್ ಶಾಪ್ ಅನ್ನು ಹೊಂದಿದ್ದರು.
ಮೃತರು ಪತ್ನಿ, ಮಗಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಮೃತದೇಹವನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಯಲ್ಲಿರಿಸಲಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಭೇಟಿ ನೀಡಿದ್ದಾರೆ ಎಂದು ವರದಿಯಾಗಿದೆ.
- Advertisement -