Saturday, April 27, 2024
spot_imgspot_img
spot_imgspot_img

ವಿಟ್ಲ: ಕೊರಗಜ್ಜ ದೈವಕ್ಕೆ ನಿಂದನೆ ಮಾಡಿದ ಹಿನ್ನೆಲೆ ಪ್ರಚೋದನಕಾರಿ ಪೋಸ್ಟ್; ವಿಷ್ಣು ಪ್ರಸಾದ್ ನಿಡ್ಡಾಜೆ ವಿರುದ್ದ ಎಫ್ ಐ ಆರ್ ದಾಖಲು..!

- Advertisement -G L Acharya panikkar
- Advertisement -

ವಿಟ್ಲ: ಇತ್ತೀಚೆಗಷ್ಟೇ ಸಾಲೆತ್ತೂರಿನಲ್ಲಿ ವರನೊಬ್ಬ ಕೊರಗಜ್ಜನ ವೇಷ ಭೂಷಣ ಧರಿಸಿದ್ದ ವಿಚಾರ ಎಲ್ಲೆಡೆ ಭಾರಿ ಚರ್ಚೆಗೆ ಕಾರಣವಾಗಿದ್ದು, ಈ ಘಟನೆಗೆ ಸಂಬಂಧಪಟ್ಟಂತೆ ಪ್ರಚೋದನಾತ್ಮಕವಾಗಿ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದ ಫೆಡರಲ್ ಬ್ಯಾಂಕಿನ ಅಧಿಕಾರಿ ವಿಷ್ಣು ಪ್ರಸಾದ್ ನಿಡ್ಡಾಜೆ ಎಂಬವರ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರಿನಲ್ಲೂ ಗುಜರಾತ್ ಮಾದರಿಯಂತೆ ಮುಸ್ಲಿಮರ ನರಮೇಧ ನಡೆಸಬೇಕು. ಹಾಗಾದರೆ ಮಾತ್ರ ಅವರು ಪಾಠ ಕಲಿಯಲಿದ್ದಾರೆ ಎಂಬರ್ಥ ಬರುವ ರೀತಿಯಲ್ಲಿ ಪೋಸ್ಟ್ ಹಾಕಿದ್ದು, ಈ ಕುರಿತು ಪಿ ಎಫ್ ಐ ಸಂಘಟನೆ ವಿಟ್ಲ ಪೊಲೀಸ್ ಠಾಣೆಯಲ್ಲಿ ನೀಡಿದ್ದ ದೂರಿನ ಆಧಾರದಲ್ಲಿ ವಿಷ್ಣು ಪ್ರಸಾದ್ ನಿಡ್ಡಾಜೆ ವಿರುದ್ದ ಎಫ್ ಐ ಆರ್ ದಾಖಲಾಗಿದೆ.

vtv vitla
vtv vitla
vtv vitla

- Advertisement -

Related news

error: Content is protected !!