Tuesday, April 30, 2024
spot_imgspot_img
spot_imgspot_img

ವಿಟ್ಲ: (ಫೆ.24,25) ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಸಾರಥ್ಯದಲ್ಲಿ ಸ್ವಸ್ತಿಕ್ ಕಲೋತ್ಸವ 2K24 ಪತ್ರಿಕೆ ಬಿಡುಗಡೆ

- Advertisement -G L Acharya panikkar
- Advertisement -

ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಇದರ ಸ್ವಸ್ತಿಕ್ ಕಲೋತ್ಸವ ಹಾಗೂ ನರೇಂದ್ರ ಟ್ರೋಫಿ ಅಂತರಾಜ್ಯ ಕಬಡ್ಡಿ ಪಂದ್ಯಾಟ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಇಂದು ವಿಟ್ಲದಲ್ಲಿ ನೆರವೇರಿತು.

ವಿಟ್ಲದ ಖ್ಯಾತ ಉದ್ಯಮಿ ಹಾಗೂ ಸಾಮಾಜಿಕ ಕಾರ್ಯಕರ್ತರಾದ ಸತೀಶ್ ಆಳ್ವಾ ಇರ ಬಾಳಿಕೆ ಇವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸುತ್ತಾ, ಸ್ವಸ್ತಿಕ್ ಫ್ರೆಂಡ್ಸ್ ಇದರ ಸದಸ್ಯರು ಹಲವಾರು ಸಾಮಾಜಿಕ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದು ಉತ್ಸಾಹಿ ಯುವಕರ ತಂಡವನ್ನು ಹೊಂದಿದೆ ಎಂದು ತಿಳಿಸಿದರು.ನರೇಂದ್ರ ಮೋದಿ ಯವರ ಹೆಸರಲ್ಲಿ ಈ ಕಾರ್ಯಕ್ರಮ ನಡೆಯುತ್ತಿದ್ದು ಈ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಹಾರೈಸಿದರು ವಿಟ್ಲ ಅರಮನೆಯ ಕೃಷ್ಣಯ್ಯ ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ತಂಡಕ್ಕೆ ಶುಭ ಹಾರೈಸಿದರು.

ಸ್ವಸ್ತಿಕ್ ಫ್ರೆಂಡ್ಸ್ ಇದರ ಗೌರವ ಸಲಹೆಗಾರರಾದ ಅರುಣ್ ವಿಟ್ಲ ಕಾರ್ಯಕ್ರಮದ ಉದ್ದೇಶ ಹಾಗೂ ಕಾರ್ಯಕ್ರಮದ ಪರಿಚಯ ಮಾಡಿದರು. ವೇದಿಕೆಯಲ್ಲಿ ಪಟ್ಟಣ ಪಂಚಾಯತ್ ಸದಸ್ಯರಾದ ರವೀಶ್ ವಿಟ್ಲ, ಉಪಸ್ಥಿತರಿದ್ದರು. ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಇದರ ಅಧ್ಯಕ್ಷರಾದ ತಾರಾನಾಥ ವಿಟ್ಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹರೀಶ್ ವಿಠಲ ಕಾರ್ಯಕ್ರಮ ನಿರೂಪಿಸಿ, ಅತಿಥಿಗಳನ್ನು ಸ್ವಾಗತಿಸಿದರು. ಸ್ವಸ್ತಿಕ್ ಫ್ರೆಂಡ್ಸ್ ನ ಕ್ರೀಡಾ ಕಾರ್ಯದರ್ಶಿ ಕಾರ್ಯದರ್ಶಿ ವಿಶ್ವನಾಥ ಅಳಿಕೆ ವಂದಿಸಿದರು. ಕುಮಾರಿ ದಕ್ಷ ಪ್ರಾರ್ಥನೆ ಮಾಡಿದರು. ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಇದರ ಎಲ್ಲ ಸದಸ್ಯರು ಉಪಸ್ಥಿತರಿದ್ದರು.

- Advertisement -

Related news

error: Content is protected !!