- Advertisement -
- Advertisement -
ವಿಟ್ಲ: ಶ್ರೀ ಸತ್ಯಸಾಯಿ ಸೇವಾ ಸಂಸ್ಥೆ ಕರ್ನಾಟಕ ಇವರು ನಡೆಸಿದ “ಸೌತ್ ಝೋನಲ್ ಲೆವೆಲ್ ಪ್ರಬಂಧ ಸ್ಪರ್ಧೆ- 2023” ಇದರಲ್ಲಿ, ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 9 ನೇ ತರಗತಿಯ ವಿದ್ಯಾರ್ಥಿನಿ ವೈಷ್ಣವಿ ಶಾಲಾ ಮಟ್ಟದಲ್ಲಿ ಹಾಗೂ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ವಿಧ್ಯಾರ್ಥಿಗಳಾದ ದಿಶಾ ಎಂ, ನಿವ್ಯಾ ರೈ ಹಾಗೂ ಪ್ರಗತಿ ಶಾಲಾ ಹಂತದ ಸ್ಪರ್ಧೆಯಲ್ಲಿ ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನವನ್ನು ಪಡೆದಿದ್ದಾರೆ. ಸ್ಪರ್ಧಾ ವಿಜೇತರನ್ನು ಹಾಗೂ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳನ್ನು ಶಾಲಾ ಮುಖ್ಯಸ್ಥರು ಹಾಗೂ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
- Advertisement -