- Advertisement -
- Advertisement -
ವಿಟ್ಲ : ವಿಶ್ವ ಹಿಂದೂ ಪರಿಷದ್ ವಿಟ್ಲ ಇದರ ಆಶ್ರಯದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ನಡೆದ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಶೋಭಾಯಾತ್ರೆ ನಡೆಯಿತು.
ಸೆ.19 ರಂದು ಪ್ರಾರಂಭಗೊಂಡ ಗಣೇಶೋತ್ಸವವು ಸೆ.21ರ ವರೆಗೆ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಟ್ಲ ಅನಂತ ಸದನದಲ್ಲಿ ವಿಜೃಂಭಣೆಯಿಂದ ನಡೆಯಿತು.
ಸೆ.21ರಂದು ಶ್ರೀ ಮಹಾಗಣಪತಿಯ ಶೋಭಾಯಾತ್ರೆಯು ಮಂಗಳೂರು ರಸ್ತೆಯ ಭಾರತ್ ಪೆಟ್ರೋಲಿಯಂ, ಪುತ್ತೂರು ರಸ್ತೆಯ ಮೇಗಿನ ಪೇಟೆಯಾಗಿ, ಅಡ್ಡದ ಬೀದಿ ರಸ್ತೆ ಅರಮನೆ ರಸ್ತೆಯಾಗಿ ಕಾಶೀಮಠ, ಶಾಲಾ ರಸ್ತೆಯಿಂದ ಸಾಗಿ ಶ್ರೀ ಅನಂತೇಶ್ವರ ದೇವಸ್ಥಾನದ ಕೆರೆಯ ಬಳಿ ಪೂಜೆ ನಡೆದು ಬಳಿಕ ಕೆರೆಯಲ್ಲಿ ವಿಗ್ರಹದ ಜಲಸ್ತಂಭನ ನಡೆಯಿತು.
- Advertisement -