ವಿಟ್ಲ: ಗ್ರಾ. ಪಂ ಸದಸ್ಯ ಪುನೀತ್ ಮಾಡತ್ತಾರು ಎಂಬವರಿಗೆ ಹಾಡಹಗಲೇ ಸಾರ್ವಜನಿಕವಾಗಿ ಚಾಕು ತೋರಿಸಿ ಹಲ್ಲೆಗೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವಿಟ್ಲದ ಚಂದಳಿಕೆ ಮಾಡತ್ತಡ್ಕ ರಸ್ತೆಯಲ್ಲಿ ನಿನ್ನೆ ಈ ಘಟನೆ ನಡೆದಿತ್ತು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕೇಪು ಗಣೇಶ ಮತ್ತು ನಿಶಾಂತ್ ಶೆಟ್ಟಿ ನೀರುಮಾರ್ಗ ಎನ್ನಲಾಗಿದೆ. ಸೆಕ್ಷನ್ 324. 506. 504. 323 ಅನ್ವಯ ಬಂಧಿಸಲಾಗಿದೆ.
ಘಟನೆಯ ವಿವಿರ:
ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ನ ಸದಸ್ಯರಾದ ಪುನೀತ್ ಮಾಡತ್ತಾರು ರವರು ವಿಟ್ಲ ಚಂದಳಿಕೆ ಮಾಡತ್ತಡ್ಕ ರಸ್ತೆಯನ್ನು ದುರಸ್ತಿ ಮಾಡುತ್ತಿರುವ ವೇಳೆ ಕಾಮಗಾರಿಗಾಗಿ ಕಾಂಕ್ರೇಟ್ ಮಿಕ್ಸರ್ ರಸ್ತೆಗೆ ಅಡ್ಡದಾಗಿ ನಿಲ್ಲಿಸಿದ್ದು, ಈ ವೇಳೆ ಬೈಕ್ ನಲ್ಲಿ ಆಗಮಿಸಿದ ಕೇಪು ಗಣೇಶ ಮತ್ತು ಆತನ ಸಹಚರರು ಯಾಕೇ ಕಾಂಕ್ರೇಟ್ ಮಿಕ್ಸರ್ ಅಡ್ಡ ನಿಲ್ಲಿಸಿದ್ದು, ನಾವು ಹೇಗೆ ಹೋಗುವುದು..!??, ನಿಮಗೆ ರೋಡ್ ಬ್ಲಾಕ್ ಮಾಡಲು ಯಾರು ಅಧಿಕಾರ ಕೊಟ್ಟದ್ದು ಎಂದು ಪ್ರಶ್ನಿಸಿ ಏಕಾಏಕಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಪುನೀತ್ ರವರು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೇಪು ಗಣೇಶ ರೌಡಿ ಶೀಟರ್ ಆಗಿದ್ದು ಇದೇ ರೀತಿ ಹಲವಾರು ಬಾರಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ. ಇದೀಗ ಈತ ಮತ್ತೆ ಬಾಲ ಬಿಚ್ಚಿದ್ದು ಪೊಲೀಸರು ಬಂಧಿಸಿದ್ದಾರೆ.