- Advertisement -
- Advertisement -
ವಿಟ್ಲ: 2021-2022ನೇ ಸಾಲಿನ ವಾಜಪೇಯಿ ನಗರ ವಸತಿ ಯೋಜನೆ ಹಾಗೂ ಅಂಬೇಡ್ಕರ್ ವಸತಿ ಯೋಜನೆಯಡಿಯಲ್ಲಿ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಫಲಾನುಭವಿಗಳಿಗೆ ಮನೆ ಮಂಜೂರಾತಿ ಹಾಗೂ ಕಾಮಗಾರಿ ಆದೇಶ ಪತ್ರ ವಿತರಣಾ ಕಾರ್ಯಕ್ರಮ ವಿಟ್ಲದ ಐ.ಬಿ ಹಾಲ್ನಲ್ಲಿ ನಡೆಯಿತು.
ಫಲಾನುಭವಿಗಳಿಗೆ ಪುತ್ತೂರು ಶಾಸಕ ಸಂಜೀವ ಮಠಂದೂರು ಮನೆ ಮಂಜೂರಾತಿ ಹಾಗೂ ಕಾಮಗಾರಿ ಆದೇಶ ಪತ್ರವನ್ನ ವಿತರಿಸಿದರು. ಶಾಸಕರಿಂದ 33 ಫಲಾನುಭವಿಗಳಿಗೆ ಮನೆ ಮಂಜೂರಾತಿ ಹಾಗೂ ಕಾಮಗಾರಿ ಆದೇಶ ಪತ್ರವನ್ನ ಪಡೆದರು.
ಈ ಸಂದರ್ಭದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಗೋಪಾಲ ನಾಯ್ಕ, ಪಂಚಾಯತ್ ಸದ್ಯರುಗಳಾದ ಅರುಣ್ ವಿಟ್ಲ, ಅಶೋಕ್ ಕುಮಾರ್ ಶೆಟ್ಟಿ, ರವೀಶ್ ವಿಟ್ಲ, ರಕ್ಷಿತ ಸನ್ನತ್, ವಸಂತ್ ವಿಟ್ಲ ಹಾಗೂ ಮೋಹನ್ ದಾಸ್ ಉಕ್ಕುಡ ಮತ್ತು ಸ್ಥಳೀಯ ಜನಪ್ರತಿನಿಧಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.
- Advertisement -