- Advertisement -
- Advertisement -
ವಿಟ್ಲ: ಅಕ್ರಮವಾಗಿ ಮರಳು ಶೇಖರಣೆ ಮಾಡಿ ಲೋಡ್ ಮರಳನ್ನು ವಿಟ್ಲ ಪೊಲೀಸ್ ಠಾಣಾ ಪೊಲೀಸ್ ಉಪ-ನಿರೀಕ್ಷಕರು ಹಾಗೂ ಸಿಬ್ಬಂದಿಗಳ ತಂಡ ಪತ್ತೆಹಚ್ಚಿರುವ ಘಟನೆ ವಿಟ್ಲದಲ್ಲಿ ನಡೆದಿದೆ.
ಆರೋಪಿಗಳನ್ನು ಸುದೇಶ್ ಭಂಡಾರಿ, ಷರೀಪ್ ಮತ್ತು ನಾರಾಯಣ ಪೂಜಾರಿ ಎಂದು ಗುರುತಿಸಲಾಗಿದೆ.
ಬಂಟ್ವಾಳ ತಾಲೂಕು, ಸಾಲೆತ್ತೂರು ಗ್ರಾಮದ ಬೊಳ್ಮಾರು ನಿವಾಸಿ ಸುದೇಶ್ ಭಂಡಾರಿ ಎಂಬವರ ಜಾಗದಲ್ಲಿ, ಎಲ್ಲಿಂದಲೋ ಕಳವು ಮಾಡಿಕೊಂಡು ಬಂದು ಅಕ್ರಮವಾಗಿ ಶೇಖರಿಸಿರುವ, ಅಂದಾಜು 1.25 ಲಕ್ಷ ಮೌಲ್ಯದ ಸುಮಾರು 20 ರಿಂದ 25 ಲೋಡ್ ಮರಳನ್ನು ವಿಟ್ಲ ಪೊಲೀಸ್ ಠಾಣಾ ಪೊಲೀಸ್ ಉಪ-ನಿರೀಕ್ಷಕರು ಹಾಗೂ ಸಿಬ್ಬಂದಿಗಳ ತಂಡ ಪತ್ತೆಹಚ್ಚಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.
- Advertisement -