ವಿಟ್ಲ: ಮಾಣಿ ವಿದ್ಯಾನಗರ ಪಾಳ್ಯದಲ್ಲಿರುವ ಬಾಲವಿಕಾಸ ಆಂಗ್ಲ ಮಾದ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಜೂ.21ರಂದು ನಡೆಯಿತು. ಈ ಪ್ರಯುಕ್ತ ಶಾಲೆಯ ದಿ. ಪಾಳ್ಯ ಅನಂತರಾಮ ರೈ ವೇದಿಕೆಯಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ದೀಪಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದರು.
ಬಾಲವಿಕಾಸ ಟ್ರಸ್ಟ್ ನ ಅಧ್ಯಕ್ಷ ಪಹ್ಲಾದ್ ಜೆ. ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಟ್ರಸ್ಟ್ ನ ಉಪಾಧ್ಯಕ್ಷ ಯತಿರಾಜ್ ಎನ್., ಟ್ರಸ್ಟ್ ನ ಕಾರ್ಯದರ್ಶಿ ಮಹೇಶ್ ಶೆಟ್ಟಿ, ಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಕಸ್ತೂರಿ ಪಿ. ಶೆಟ್ಟಿ, ವೈದ್ಯರಾದ ಮನೋಹರ ರೈ, ಸಂಸ್ಥೆಯ ಹಿತೈಶಿ ಉಗ್ರಪ್ಪ ಶೆಟ್ಟಿ, ಕೊಂಬಿಲ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಾಲಾ ಮಕ್ಕಳು ಪ್ರಾರ್ಥಿಸಿದರು. ಬಾಲವಿಕಾಸ ಟ್ರಸ್ಟ್ ನ ಅಧ್ಯಕ್ಷ ಪ್ರಹ್ಲಾದ್ ಜೆ. ಶೆಟ್ಟಿ ಹಾಗೂ ಅವರ ಪತ್ನಿ ಸುಜಯ ಪಿ.ಶೆಟ್ಟಿ, ಸ್ವಾಮೀಜಿಗೆ ಫಲಪುಷ್ಪ ನೀಡಿ ಗೌರವಿಸಿದರು. ಶಾಲಾ ಆಡಳಿತಾಧಿಕಾರಿಗಳು ರವೀಂದ್ರ ದರ್ಬೆ, ಸ್ವಾಗತಿದರು. ಸುಧಾ ಎನ್.ರಾವ್ ಹಾಗೂ ಸುಪ್ರಿಯಾ ಡಿ. ಕಾರ್ಯಕ್ರಮ ನಿರೂಪಿಸಿದರು. ಶಾಲಾ ಮುಖ್ಯ ಶಿಕ್ಷಕಿ ವಿಜಯಲಕ್ಷ್ಮಿ ವಿ. ಶೆಟ್ಟಿ ವಂದಿಸಿದರು.