- Advertisement -
- Advertisement -
ವಿಟ್ಲ: ಕಸಬಾ ಗ್ರಾಮ ಕಲ್ಲಕಟ್ಟ ಎಂಬಲ್ಲಿ ಪುತ್ತೂರು ಕಡೆಯಿಂದ ವಿಟ್ಲ ಕಡೆಗೆ ಅತೀ ವೇಗವಾಗಿ ಬರುತ್ತಿದ್ದ ಟಿಪ್ಪರ್ ಲಾರಿ ಎದುರಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸಿನ ಬಲಬದಿಗೆ ತಾಗಿಸಿ ಓಮ್ನಿ ಕಾರಿಗೆ ಡಿಕ್ಕಿ ಹೊಡೆದ ಘಟನೆ ನಿನ್ನೆ ನಡೆದಿದೆ.
ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಓಮ್ನಿ ಕಾರು ಸಂಪೂರ್ಣ ಜಖಂ ಗೊಂಡಿದೆ.
ಓಮ್ನಿ ಕಾರಿನಲ್ಲಿದ್ದ ಚಾಲಕ ಸುದರ್ಶನ ಶರ್ಮಾ ಮತ್ತು ಅವರ ತಂದೆ ಗಣಪತಿ ಭಟ್ ಎಂಬವರಿಗೆ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ವಿಟ್ಲ ಪೊಲೀಸರು ಸ್ಥಳಕ್ಕೆ ಆಗಮಿಸಿ ವಾಹನಗಳನ್ನು ವಶಪಡಿಸಿ ಕೇಸು ದಾಖಲಿಸಿಕೊಂಡಿದ್ದಾರೆ.
- Advertisement -