Saturday, April 20, 2024
spot_imgspot_img
spot_imgspot_img

ವಿಟ್ಲ: ಸಮುದಾಯ ಆರೋಗ್ಯ ಕೇಂದ್ರ ವತಿಯಿಂದ ಮಲೇರಿಯಾ ಡೆಂಗ್ಯೂ ವಿರೋಧ ಮಾಸಾಚರಣೆಯ ಅಂಗವಾಗಿ ಮಾಹಿತಿ ಶಿಬಿರ

- Advertisement -G L Acharya panikkar
- Advertisement -

ವಿಟ್ಲ: ಸಮುದಾಯ ಆರೋಗ್ಯ ಕೇಂದ್ರ ವಿಟ್ಲದ ವತಿಯಿಂದ ಮಲೇರಿಯಾ ಡೆಂಗ್ಯೂ ವಿರೋಧ ಮಾಸಾಚರಣೆಯ ಅಂಗವಾಗಿ ಮಾಹಿತಿ ಶಿಬಿರವನ್ನು ವಿಟ್ಲ ಮಾದರಿ ಶಾಲೆಯಲ್ಲಿ ಏರ್ಪಡಿಸಲಾಯಿತು.

ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾಕ್ಟರ್ ವೇದಾವತಿ ಜೆ ಬಲ್ಲಾಳ್ ಇವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಕ ಅಧಿಕಾರಿ ಕುಸುಮ ಸ್ವಾಗತಿಸಿ ಪ್ರಾಸ್ತಾವಿಕ ಗೈದು ಕೀಟ ಸಣ್ಣದು ಕಾಟ ದೊಡ್ಡದು ಎಂಬುದಾಗಿ ತಿಳಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಸಮುದಾಯ ಆರೋಗ್ಯ ಕೇಂದ್ರದ ಪ್ರಭಾರ ವೈದ್ಯಾಧಿಕಾರಿ ಡಾ| ಜಯಪ್ರಕಾಶ್, “ಕೀಟ ಜನ್ಯ ಆಶ್ರಿತ ರೋಗಗಳ ಬಗ್ಗೆ ಸಮಗ್ರವಾಗಿ ತಿಳಿಸುತ್ತಾ ನಾಗರಿಕರ ಜವಾಬ್ದಾರಿಯನ್ನು ತಿಳಿಸಿದರು”.
ಈ ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಆರೋಗ್ಯ ಸಂರಕ್ಷಣಾಧಿಕಾರಿ ಚಂದ್ರಾವತಿ, ದೀಪ, ವೆರೋನಿಕಾ, ಸುಶೀಲ, ಸೌಮ್ಯ ಗೀತಾವತಿ, ಜ್ಯೋತಿ, ಲಯನ್ಸ್ ಸೇವಾ ಟ್ರಸ್ಟ್ ಇದರ ಅಧ್ಯಕ್ಷ ಸತೀಶ್ ಆಳ್ವಾ, ಲಯನ್ಸ್ ಕ್ಲಬ್ ವಿಟ್ಲದ ಸಂದೇಶ್ ಶೆಟ್ಟಿ, ರೋಟರಿ ಕ್ಲಬ್ ಅಧ್ಯಕ್ಷ ಅಣ್ಣಪ್ಪ ಶಾಸ್ತಾನ್, ಲಯನ್ಸ್ ಪ್ರಾಂತೀಯ ಸಲಹೆಗಾರ ಸುದರ್ಶನ್ ಪಡಿಯಾರ್, ಅಂಗನವಾಡಿ ಕಾರ್ಯಕರ್ತೆಯರು ಆಶಾ ಕಾರ್ಯಕರ್ತೆಯರು ಸ್ತ್ರೀಶಕ್ತಿ ಸದಸ್ಯರು ಪಟ್ಟಣ ಪಂಚಾಯತ ನಾಗರಿಕರು ಭಾಗವಹಿಸಿದ್ದರು.

- Advertisement -

Related news

error: Content is protected !!