Saturday, June 28, 2025
spot_imgspot_img
spot_imgspot_img

ವಿಟ್ಲ: ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು…!

- Advertisement -
- Advertisement -

ವಿಟ್ಲ: ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕೊಳ್ನಾಡು ಗ್ರಾಮದ ಮಂಕುಡೆ ಗುಳಿಗಳ ಗುರಿ ಎಂಬಲ್ಲಿ ನಡೆದಿದೆ.

ಮಂಕುಡೆ ಗುಳಿಗಳ ಗುರಿ ನಿವಾಸಿ ಕೇಶವ ದೇವಾಡಿಗ ಅವರ ಪುತ್ರ ರವೀಂದ್ರ ದೇವಾಡಿಗ (32) ಮೃತಪಟ್ಟವರು. ಕೂಲಿ ಕೆಲಸ ಮಾಡುತ್ತಿದ್ದ ಅವರು ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಪಾಲು ಬಿದ್ದ ಕೆರೆಗೆ ಕಾಲು ಜಾರಿ ಬಿದ್ದಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!