- Advertisement -
- Advertisement -
ವಿಟ್ಲ: ದ.ಕ ಜಿಲ್ಲಾಧಿಕಾರಿಯವರ ಆದೇಶ ಮೇರೆಗೆ ವಿಟ್ಲ ಎಸೈ ವಿನೋದ್ ಕುಮಾರ್ ರೆಡ್ಡಿ ನೇತೃತ್ವದಲ್ಲಿ ವಿಟ್ಲ ಪೊಲೀಸರು ಮಾಸ್ಕ್ ಹಾಕದ ವ್ಯಕ್ತಿಗಳಿಗೆ ವಿಟ್ಲ ಪೇಟೆಯಲ್ಲಿ ದಂಡ ವಿಧಿಸುವ ಮೂಲಕ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದೆ.
ಮಾಸ್ಕ್ ಕಡ್ಡಾಯವಾಗಿ ಹಾಕಿ ಹೊರಗಡೆ ಬರಬೇಕು ಎಂದು ಸರ್ಕಾರದ ನಿಯಮವಿದ್ದರೂ ಜನರು ಮಾತ್ರ ಕ್ಯಾರೇ ಮಾಡುತ್ತಿರಲಿಲ್ಲ. ಇತ್ತೀಚೆಗೆ ದ.ಕ ಜಿಲ್ಲಾಧಿಕಾರಿಗಳು ಮಾಸ್ಕ್ ಹಾಕದ ವ್ಯಕ್ತಿಗಳ ಮೇಲೆ ಕ್ರಮ ಕೈಗೊಳ್ಳಬೇಕೆಂದು ಆದೇಶ ನೀಡಿದ್ದರು. ಅದರಂತೆ ವಿಟ್ಲ ಎಸೈ ವಿನೋದ್ ಕುಮಾರ್ ರೆಡ್ಡಿ ಅವರ ತಂಡ ವಿಟ್ಲ ಪೇಟೆಯಲ್ಲಿ ಕಾರ್ಯಾಚರಣೆ ಮಾಡಿ, ಮಾಸ್ಕ್ ಹಾಕದೇ ಬೇಕಾಬಿಟ್ಟಿಯಾಗಿ ತಿರುಗಾಟುತ್ತಿರುವ ಜನರಿಗೆ ಬಿಸಿ ಮುಟ್ಟಿಸಿದ್ದಾರೆ.
ಮೊದಲ ದಿನ ಅಂದರೆ ಶುಕ್ರವಾರ ವಿಟ್ಲದಲ್ಲಿ 25 ಮಂದಿಗೆ ತಲಾ 100 ರೂ.ಯಂತೆ ದಂಡ ವಿಧಿಸಿದ್ದಾರೆ. ಮುಂದಿನ ದಿನಗಳಲ್ಲಿ ಇದೇ ರೀತಿ ಕಾನೂನು ಉಲ್ಲಂಘಿಸಿದರೆ ದಂಡ ವಿಧಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
- Advertisement -