Sunday, June 29, 2025
spot_imgspot_img
spot_imgspot_img

ವಿಟ್ಲ: ವಿಟ್ಲಮುಡ್ನೂರು ಗ್ರಾಮದ ಬೇರಿಕೆ ಓಟೆ ರಸ್ತೆ ಕಾಮಗಾರಿಗೆ ಶಾಸಕರಿಂದ ಶಿಲನ್ಯಾಸ

- Advertisement -
- Advertisement -

ವಿಟ್ಲ: ವಿಟ್ಲ ಮುಡ್ನೂರು ಗ್ರಾಮದ ಬೇರಿಕೆ ಓಟೆ ರಸ್ತೆ ಕಾಮಗಾರಿಗೆ ಪುತ್ತೂರು ಶಾಸಕ ಅಶೋಕ್ ಕುಮಾರ್‍ ರೈ ಶಿಲಾನ್ಯಾಸ ನೆರವೇರಿಸಿದರು. ಬಳಿಕ ಮಾತನಾಡಿದ ರಾಜ್ಯದ ಕಾಂಗ್ರೆಸ್ ಸರಕಾರ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದಾಗ ಅದರ ಬಗ್ಗೆ ವಿರೋಧ ಪಕ್ಷಗಳು ಭಾರೀ ಟೀಕೆಗಳನ್ನೇ ಮಾಡಿತ್ತು, ಜನರನ್ನು ಮೋಸಗೊಳಿಸುವ ಯೋಜನೆ ಇದು ಕಾರ್ಯರೂಪಕ್ಕೆ ಬರುವುದೇ ಇಲ್ಲ ಎಂದು ಹೇಳಿದ್ದರು ಆದರೆ ಸರಕಾರ ಆಡಳಿತಕ್ಕೆ ಬಂದು ಒಂದೇ ತಿಂಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಕಾಂಗ್ರೆಸ್ ಕೊಟ್ಟಮಾತನ್ನು ಉಳಿಸಿಕೊಂಡಿದೆ, ಆದರೆ ಬಿಜೆಪಿ ಮಾತ್ರ ಈ ಯೋಜನೆ ನಿಲ್ಲುತ್ತದೆ ಎಂದು ಅಪಪ್ರಚಾರ ಮತ್ತು ಸುಳ್ಳನ್ನು ಜನರ ನಡುವೆ ಬಿತ್ತರಿಸುತ್ತಿದೆ ಈ ಕೆಲಸವನ್ನು ಅವರು ನಿಲ್ಲಿಸಬೇಕು ಎಂದರು.

ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಾ. ರಾಜಾರಾಂ ಮಾತನಾಡಿ ವಿಟ್ಲ ಮುಡ್ನೂರು ಗ್ರಾಮದ ಬೇರಿಕೆ ಓಟೆ ರಸ್ತೆಕಾಮಗಾರಿ ಇಲ್ಲಿನ ಜನತೆಯ ಬಹುಕಾಲದ ಬೇಡಿಕೆಯಾಗಿತ್ತು ಈ ಬಾರಿ ಅದು ಈಡೇರಿದೆ ಎಂದರು.

ಕಾರ್ಯಕ್ರಮದಲ್ಲಿ ಇಂಟಕ್ ಅಧ್ಯಕ್ಷರಾದ ಜಯಪ್ರಕಾಶ್ ಬದಿನಾರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಉಮಾನಾಥ ಶೆಟ್ಟಿ ಪೆರ್ನೆ, ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ ಎಲ್ಯಣ್ಣ ಪೂಜಾರಿ, ಬೂತ್ ಅಧ್ಯಕ್ಷರಾದ ನವೀನ್ ಗೌಡ, ಅಕ್ರಮಸಕ್ರಮ ಸಮಿತಿ ಸದಸ್ಯ ರಾಮಣ್ಣ ಪಿಲಿಂಜ, ಹೊನ್ನಪ್ಪ ನಾಯ್ಕ, ಮಹೇಶ್ ಗೌಡ ಓಟೆ, ವಿಶ್ವನಾಥ ಪೂಜಾರಿ, ಚೆನ್ನಪ್ಪ ಗೌಡ, ಲೋಹಿತ್‌ ಪೂಜಾರಿ, ಸುಶಾಂತ್ ಶೆಟ್ಟಿ, ಸುಮಿತ್ ಶೆಟ್ಟಿ, ರವೀಂದ್ರ ಶೆಟ್ಟಿ ಸೇನರಮಜಲು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

- Advertisement -

Related news

error: Content is protected !!