Saturday, June 28, 2025
spot_imgspot_img
spot_imgspot_img

ಬೆಳ್ಳಂ ಬೆಳಗ್ಗೆ ವಿಟ್ಲ ಎಸೈ ವಿನೋದ್ ಕುಮಾರ್ ರೆಡ್ಡಿ ಮೇಲೆ ಗುಂಡಿನ ದಾಳಿ ಪ್ರಕರಣ: ಮತ್ತೆ ಇಬ್ಬರನ್ನು ವಶಕ್ಕೆ ಪಡೆದ ವಿಟ್ಲ ಪೊಲೀಸರು- ಕೇರಳದ ನಟೋರಿಯಸ್ ತಂಡದ ಕೃತ್ಯ!

- Advertisement -
- Advertisement -

ವಿಟ್ಲ: ಕಾಸರಗೋಡು ಜಿಲ್ಲೆಯ ಕೆಲವೆಡೆ ಅಪರಾದ ಕೃತ್ಯಗಳನ್ನು ನಡೆಸಿ ಪರಾರಿಯಾಗುತ್ತಿದ್ದ ನಟೋರಿಯಸ್ ಗ್ಯಾಂಗ್ ಒಂದನ್ನು ವಿಟ್ಲ ಠಾಣಾ ಎಸ್. ಐ ವಿನೋದ್ ರೆಡ್ಡಿಯವರ ನೇತೃತ್ವದ ಪೊಲೀಸರ ತಂಡ ವಶಕ್ಕೆ ಪಡೆದ ಘಟನೆ ಮಾ.26ರ ಮುಂಜಾನೆ ವೇಳೆ ಸಾಲೆತ್ತೂರು ಸಮೀಪದ ಕೊಡಂಗೆ ಎಂಬಲ್ಲಿ ನಡೆದಿದೆ.

ಘಟನೆಯ ವೇಳೆ ಪೊಲೀಸರ ಮೇಲೆ ನಟೋರಿಯಸ್ ತಂಡ ಗುಂಡಿನ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ. ಆರೋಪಿಗಳ ಇಡೀ ತಂಡವೇ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಉಳಿದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಕೇರಳದಲ್ಲಿ ಗುಂಡಿನ ದಾಳಿ ನಡೆಸಿ ವಿಟ್ಲ ಮೂಲಕ ಪರಾರಿಯಾಗಲು ಮುಂದಾಗುತ್ತಿದ್ದಂತೆ ವಿಟ್ಲ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ವಿಟ್ಲ ಎಸೈ ವಿನೋದ್ ರೆಡ್ಡಿ ನೇತೃತ್ವದ ತಂಡ ಆರೋಪಿಗಳನ್ನು ಅಡ್ಡ ಗಟ್ಟಲು ಮುಂದಾದಾಗ ಅವರ ಮೇಲೆ ದಾಳಿಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಘಟನೆಯಿಂದಾಗಿ ಕಾರ್ಯಾಚರಣೆ ತಂಡದಲ್ಲಿದ್ದ ಪೊಲೀಸರಲ್ಲಿ ಕೆಲವರಿಗೆ ಸಣ್ಣ ಪುಟ್ಟ ಗಾಯವಾಗಿದೆ.

ತಪ್ಪಿಸಿಕೊಂಡ ಆರೋಪಿಗಳಲ್ಲಿ ಮತ್ತೆ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು ಒಟ್ಟು ಮೂವರನ್ನು ಬಂಧಿಸಿದ್ದಾರೆ. ತನಿಖೆ ಚುರುಕುಗೊಳಿಸಿದ ಪೊಲೀಸರು ಇನ್ನು ಹಲವರನ್ನು ಬಂದಿಸುವ ಸಾಧ್ಯತೆ ಇದೆ.

ನಟೋರಿಯಸ್ ಗ್ಯಾಂಗ್ ನ ತಂಡ ಈ ಕೃತ್ಯ ಎಸಗಿದ್ದು ಇನ್ನಷ್ಟು ಸ್ಪೋಟಕ ಮಾಹಿತಿಗಳು ತನಿಖೆಯಿಂದ ಹೊರಬೀಳಬೇಕಿದೆ

- Advertisement -

Related news

error: Content is protected !!