Sunday, May 25, 2025
spot_imgspot_img
spot_imgspot_img

ವಿಟ್ಲ ಪೊಲೀಸರ ಭರ್ಜರಿ ಕಾರ್ಯಾಚರಣೆ : ಇಬ್ಬರು ಕಳವು ಆರೋಪಿಗಳ ಬಂಧನ

- Advertisement -
- Advertisement -

ವಿಟ್ಲ : ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೋಲೀಸರ ತಂಡ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಆರೋಪಿತರಿಂದ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬೊಳಿಯಾರು ಗ್ರಾಮದ ಮಹಮ್ಮದ್ ರಿಯಾಜ್ ಹಸನಬ್ಬ ಯಾನೆ ರಿಯಾಜ್ (38) ಮತ್ತು ಉಳ್ಳಾಲ ಕೋಟೆ ನಿವಾಸಿ ಮೊಹಮ್ಮದ್ ಇಂಮ್ತಿಯಾಜ್ ( 38) ಬಂಧಿತ ಆರೋಪಿಗಳು.

ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ರೂ 1,35,000/–ರೂ ಮೌಲ್ಯದ ಗ್ಯಾಸ್‌ ಸಿಲಿಂಡರ್‌ ಹಾಗೂ ಮನೆ ಸಾಮಗ್ರಿಗಳು , ಹಾಗೂ ಕಳ್ಳತನಕ್ಕೆ ಉಪಯೋಗಿಸಿದ 1,50,000/- ರೂ ಮೌಲ್ಯದ KA-19-AD-0585 ನೊಂದಣಿ ನಂಬ್ರದ ಅಟೊ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ.ಪೋಲೀಸರು ಸ್ವಾದೀನಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ- 2,85,000/- ರೂ ಎಂದು ತಿಳಿಸಿದ್ದಾರೆ.

ಆರೋಪಿತರು ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದಲ್ಲಿ, ವಿಟ್ಲ ಪೋಲೀಸ್ ಠಾಣೆಯ ಮಿತ್ರರು, ಕೊಡಾಜೆ ಎರಡು ಮನೆ ಕಳವು ಪ್ರಕರಣಗಳಲ್ಲಿ ಹಾಗೂ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿನ ಶಾಲೆ ಹಾಗೂ ಅಂಗನವಾಡಿ ಕಳವು ಪ್ರಕರಣಗಳಲ್ಲಿ ಭಾಗಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಇವರ ವಿರುದ್ದ ಕೇರಳ ರಾಜ್ಯದ ಕುಂಬಳೆ ಹಾಗೂ ಮಂಗಳೂರು ಕೋಣಾಜೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

.ಕಾರ್ಯಾಚರಣೆಯನ್ನು ದ.ಕ ಜಿಲ್ಲಾ ಪೊಲೀಸ್‌ ಅಧೀಕ್ಷಕ ಯತೀಶ್‌ ಎನ್‌ ಐ.ಪಿ.ಎಸ್‌ ಮತ್ತು ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ರಾಜೇಂದ್ರ ಡಿ ಎಸ್‌ ರವರ ಮಾರ್ಗದರ್ಶನದಂತೆ ಬಂಟ್ವಾಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಎಸ್.‌ ವಿಜಯ ಪ್ರಸಾದ್‌ ರವರ ನಿರ್ದೇಶನದಂತೆ, ವಿಟ್ಲ ಪೊಲೀಸ್ ಠಾಣಾ ಪೊಲೀಸ್‌ ನಿರೀಕ್ಷಕ ನಾಗರಾಜ್‌ ಹೆಚ್‌ ಈ ರವರ ನೇತ್ರತ್ವದಲ್ಲಿ ಪೊಲೀಸ್‌ ಉಪ ನಿರೀಕ್ಷಕರಾದ ವಿದ್ಯಾ ಕೆ.ಜೆ. ರತ್ನಕುಮಾರ್‌, ಕೌಶಿಕ್‌ ಸಿಬ್ಬಂಧಿಗಳಾದ ಉದಯ ರೈ, ರಾಧಾಕೃಷ್ಣ ,ರಕ್ಷೀತ್‌ ರೈ,ಶ್ರೀಧರ ಸಿ ಎಸ್‌, ಕೃಷ್ಣ ನಾಯ್ಕ್‌, ಗದಿಗೆಪ್ಪ ಕಲ್ಲೂರ, ಶಂಕರ ಶಂಶಿ, ಮನೋಜ್‌,ಸತೀಶ್‌ ,ಗಣಕಯಂತ್ರ ವಿಭಾಗದ ಸಂಪತ್‌, ದಿವಾಕರ್‌, ಭಾಗವಹಿಸಿರುತ್ತಾರೆ.

- Advertisement -

Related news

error: Content is protected !!