Sunday, June 29, 2025
spot_imgspot_img
spot_imgspot_img

ವಿಟ್ಲ: ಪ್ರವೀಣ್ ಎಂಬಾತನ ಮೇಲೆ ಬಿಜೆಪಿ ಕಾರ್ಯಕರ್ತರಿಂದ ದಾಳಿ – ಆಸ್ಪತ್ರೆಗೆ ದಾಖಲು

- Advertisement -
- Advertisement -

ವಿಟ್ಲ: ಬಿಜೆಪಿ ಕಾರ್ಯಕರ್ತರು ಪ್ರವೀಣ್ ಎಂಬವರ ಮೇಲೆ ದಾಳಿ ನಡೆಸಿದ ಘಟನೆ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ನಡೆದಿದೆ. ಚುನಾವಣಾ ವಿಚಾರವಾಗಿ ಹಲ್ಲೆ ನಡೆದಿದೆ ಎನ್ನಲಾಗಿದೆ. ಗಾಯಾಳು ಪ್ರವೀಣ್ ಪುತ್ತೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಲ್ಲ ಮೂಲಗಳ ಪ್ರಕಾರ, ಪ್ರವೀಣ್ ಎಂಬವರು ಕೆಲಸ ಮುಗಿಸಿ ಮನೆಗೆ ಹೋಗುತ್ತಾ ಇರುವಾಗ ದಾಳಿ ನಡೆದಿದೆ. ಸ್ಥಳೀಯ ಬಿಜೆಪಿ ನಾಯಕರು ಚುನಾವಣಾ ವಿಚಾರಕ್ಕೆ ಸಂಬಂಧಿಸಿ ಪ್ರವೀಣ್ ಎಂಬವರ ಮೇಲೆ ಹಿಗ್ಗಾಮುಗ್ಗ ಥಳಿಸಿದ್ದಾರೆ. ಹಲ್ಲೆಗೈದವರನ್ನು ಬಜರಂಗದಳ ಪೆರಾಜೆ ಸಂಚಾಲಕ ಮಹೇಂದ್ರ ಮತ್ತು ಪ್ರಶಾಂತ್ ನಾಯಕ್ ಎಂದು ಹೇಳಲಾಗುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

- Advertisement -

Related news

error: Content is protected !!