- Advertisement -
- Advertisement -
ವಿಟ್ಲ: ಬಿಜೆಪಿ ಕಾರ್ಯಕರ್ತರು ಪ್ರವೀಣ್ ಎಂಬವರ ಮೇಲೆ ದಾಳಿ ನಡೆಸಿದ ಘಟನೆ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ನಡೆದಿದೆ. ಚುನಾವಣಾ ವಿಚಾರವಾಗಿ ಹಲ್ಲೆ ನಡೆದಿದೆ ಎನ್ನಲಾಗಿದೆ. ಗಾಯಾಳು ಪ್ರವೀಣ್ ಪುತ್ತೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಲ್ಲ ಮೂಲಗಳ ಪ್ರಕಾರ, ಪ್ರವೀಣ್ ಎಂಬವರು ಕೆಲಸ ಮುಗಿಸಿ ಮನೆಗೆ ಹೋಗುತ್ತಾ ಇರುವಾಗ ದಾಳಿ ನಡೆದಿದೆ. ಸ್ಥಳೀಯ ಬಿಜೆಪಿ ನಾಯಕರು ಚುನಾವಣಾ ವಿಚಾರಕ್ಕೆ ಸಂಬಂಧಿಸಿ ಪ್ರವೀಣ್ ಎಂಬವರ ಮೇಲೆ ಹಿಗ್ಗಾಮುಗ್ಗ ಥಳಿಸಿದ್ದಾರೆ. ಹಲ್ಲೆಗೈದವರನ್ನು ಬಜರಂಗದಳ ಪೆರಾಜೆ ಸಂಚಾಲಕ ಮಹೇಂದ್ರ ಮತ್ತು ಪ್ರಶಾಂತ್ ನಾಯಕ್ ಎಂದು ಹೇಳಲಾಗುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
- Advertisement -