- Advertisement -
- Advertisement -
ವಿಟ್ಲ: ವಿಟ್ಲ ಪುಣಚ ಗ್ರಾಮದ ಪೊಯ್ಯಮೂಲೆ ಮಹಾಲಿಂಗ ನಾಯ್ಕ್(63) ಎಂಬವರು ನಿನ್ನೆ ಅಡಿಕೆ ಕೊಯ್ಯುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಇಂದು ನಡೆದಿದೆ.
ಫೆ.08 ರಂದು ಮಹಾಲಿಂಗ ನಾಯ್ಕ್ ಪೊಯ್ಯಮೂಲೆ ಎಂಬಲ್ಲಿ ಅಡಿಕೆ ಕೊಯ್ಯುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಬಿದ್ದು ಗಾಯಗೊಂಡಿರುತ್ತಾರೆ.ತಕ್ಷಣವೇ ಅವರನ್ನು ಪುತ್ತೂರು ಆದರ್ಶ ಆಸ್ಪತ್ರೆಗೆ ದಾಖಲಿಸುತ್ತಾರೆ.ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ ಜೆ ಆಸ್ವತ್ರೆಗೆ ಕರೆದು ಕೊಂಡು ಹೋದರು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -