Thursday, April 25, 2024
spot_imgspot_img
spot_imgspot_img

ಅತ್ಯಾಚಾರಿಗಳ ಮೇಲೆ ಎನ್‌ಕೌಂಟರ್ ಮಾಡಬೇಕು- ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಬಿ.ಕೆ ಸೇಸಪ್ಪ ಬೆದ್ರಕಾಡು ಆಗ್ರಹ

- Advertisement -G L Acharya panikkar
- Advertisement -

ವಿಟ್ಲ: ಉತ್ತರ ಪ್ರದೇಶದ ಹತ್ರಾಸ್ ಎಂಬಲ್ಲಿ ದಲಿತ ಸಮುದಾಯದ ಯುವತಿಯನ್ನು ಅತ್ಯಾಚಾರ ನಡೆಸಿ ಕೊಲೆ ಮಾಡಿದ ಘಟನೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಪುತ್ತೂರು, ಸುಳ್ಯ ಮತ್ತು ಧರ್ಮಸ್ಥಳ ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ದಲಿತ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಘಟನೆಯನ್ನು ಖಂಡಿಸುತ್ತಿದ್ದು, ಅತ್ಯಾಚಾರಿಗಳ ಮೇಲೆ ಎನ್‌ಕೌಂಟರ್ ಮಾಡಬೇಕು ಎಂದು ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಬಿ.ಕೆ ಸೇಸಪ್ಪ ಬೆದ್ರಕಾಡು ಆಗ್ರಹಿಸಿದರು.

ಅವರು ವಿಟ್ಲದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಉತ್ತರ ಪ್ರದೇಶದ ಸಾರ್ವಜನಿಕರಿಗೆ ರಕ್ಷಣೆ ನೀಡಲು ನಿರ್ಲಕ್ಷ್ಯ ಮಾಡಿದ ಅಧಿಕಾರಿಗಳನ್ನು ಕೆಲಸದಿಂದ ವಜಾ ಮಾಡಬೇಕು. ಮುಂದಿನ ದಿನಗಳಲ್ಲಿ ತಂತಹ ಘಟನೆ ನಡೆಯದಂತೆ ಕ್ರಮ ಜರುಗಿಸಬೇಕು ಎಂದು ಹೇಳಿದ ಅವರು ಈ ಘಟನೆಯ ವಿರುದ್ಧ ಸಮಾನ ಮನಸ್ಕ ಸಂಘಟನೆಗಳ ವತಿಯಿಂದ ಇದೇ ೧೯ರಂದು ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಯು, ಸಂಚಾಲಕ ಗೋಪಾಲ ನೇರಳಕಟ್ಟೆ, ಗಣೇಶ್ ಸೀಗೆಬಲ್ಲೆ ಉಪಸ್ಥಿತರಿದ್ದರು.

- Advertisement -

Related news

error: Content is protected !!