Monday, June 30, 2025
spot_imgspot_img
spot_imgspot_img

ವಿಟ್ಲ: ಎಪ್ರಿಲ್ 7 ರಂದು ನೇರಳಕಟ್ಟೆಯಲ್ಲಿ 12 ಜೋಡಿಗಳ ಸಾಮೂಹಿಕ ವಿವಾಹ

- Advertisement -
- Advertisement -

ವಿಟ್ಲ: ಮಂಗಳೂರಿನ ಅಲ್ ವಫಾ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಎಪ್ರಿಲ್ 7 ರಂದು 12 ಜೋಡಿಗಳ ಸರಳ ಸಾಮೂಹಿಕ ವಿವಾಹ ಸಮಾರಂಭವು ಬಂಟ್ವಾಳ ತಾಲೂಕಿನ ನೇರಳಕಟ್ಟೆಯ ಜನಪ್ರಿಯ ಗಾರ್ಡನ್ ಸಭಾಂಗಣದಲ್ಲಿ ನಡೆಯಲಿದೆ.

ಉಡುಪಿ ಜಿಲ್ಲಾ ಸಂಯುಕ್ತ ಖಾಝಿ ಹಾಜಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕೂರ್ನಡ್ಕ ಪೀರ್ ಮೊಹಲ್ಲಾ ಜಮಾಅತ್‍ನ ಖಾಝಿ ಹಾಜಿ ಬಿ.ಕೆ. ಅಬ್ದುಲ್ ಖಾದಿರ್ ಮುಸ್ಲಿಯಾರ್ ಬಂಬ್ರಾಣ ನಿಕಾಹ್‍ನ ನೇತ್ರತ್ವ ವಹಿಸುವರು. ಅಲ್ ವಫಾ ಚಾರಿಟೆಬಲ್ ಟ್ರಸ್ಟ್ ನ ಅಧ್ಯಕ್ಷ ಮುಹಮ್ಮದ್ ಹನೀಫ್ ಹಾಜಿ ಗೋಳ್ತಮಜಲು ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.

ಶಾಸಕ ಯು.ಟಿ ಖಾದರ್, ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್, ಅಲ್ ಮುಝೈನ್ ಸಂಸ್ಥೆಯ ಆಡಳಿತ ನಿರ್ದೇಶಕ ಬಿ. ಝಕರಿಯಾ ಜೋಕಟ್ಟೆ, ಎಕ್ಸ್‍ಪರ್ಟೈಸ್ ಸಂಸ್ಥೆಯ ಉಪಾಧ್ಯಕ್ಷ ಕೆ.ಎಸ್. ಶೇಖಬ್ಬ ಕರ್ನೀರೆ, ಅಬುಧಾಬಿಯ ಬ್ಯಾರೀಸ್ ವೆಲ್ಫೇರ್ ಫೋರಂನ ಅಧ್ಯಕ್ಷ ಮುಹಮ್ಮದ್ ಅಲಿ ಉಚ್ಚಿಲ್, ವೈಟ್‍ಸ್ಟೋನ್ ಸಂಸ್ಥೆಯ ಆಡಳಿತ ನಿರ್ದೇಶಕ ಬಿ.ಎಂ. ಶರೀಫ್, ಹಾಸನ ಜನಪ್ರಿಯ ಆಸ್ಪತ್ರೆಯ ಮಾಲಕ ಡಾ. ಅಬ್ದುಲ್ ಬಶೀರ್ ವಿ.ಕೆ, ಹೈಸಂ ಸ್ಟೀಲ್ಸ್ ನ ಆಡಳಿತ ನಿರ್ದೇಶಕ ಅಹ್ಮದ್ ಶಾಕಿರ್, ಮುಹಮ್ಮದ್ ಫಾರೂಕ್ ಪೋರ್ಟ್‍ಫೋಲಿಯೊ, ಹಾಗೂ ಮನ್ನಾನ್ ಫೌಂಡೇಶನ್‍ನ ಅಧ್ಯಕ್ಷ ಆರಿಫ್ ಬಿ.ಎಂ. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಎಂದು ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಉಮರ್ ಯು.ಹೆಚ್. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!