Monday, May 6, 2024
spot_imgspot_img
spot_imgspot_img

ವಿಟ್ಲ: (ಸೆ.9) ಪ್ರಶಸ್ತಿ ವಿಜೇತ ಯುವಕ ಮಂಡಲ (ರಿ.) ವಿಟ್ಲ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 46ನೇ ವರ್ಷದ ಮೊಸರು ಕುಡಿಕೆ ಉತ್ಸವ

- Advertisement -G L Acharya panikkar
- Advertisement -

ವಿಟ್ಲ: ಪ್ರಶಸ್ತಿ ವಿಜೇತ ಯುವಕ ಮಂಡಲ (ರಿ.) ವಿಟ್ಲ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 46ನೇ ವರ್ಷದ ಮೊಸರು ಕುಡಿಕೆ ಉತ್ಸವವು ಸೆ.9ರಂದು ಸರಕಾರಿ ಪ್ರೌಢ ಶಾಲೆ (RMSA) ವಿಟ್ಲ ಇಲ್ಲಿ ನಡೆಯಲಿದೆ.

ಬೆಳಿಗ್ಗೆ ಗಂಟೆ 10ಕ್ಕೆ ಲ|ಒ.ಎ ಕೃಷ್ಣ ಉದ್ಯಮಿಗಳು ವಿಟ್ಲ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷೆ ಜಲಜಾಕ್ಷಿ, ವಿಟ್ಲ ಜೇಸಿಸ್ ಅಧ್ಯಕ್ಷ ಪರಮೇಶ್ವರ ಹೆಗಡೆ ಭಾಗವಹಿಸಲಿದ್ದಾರೆ.

ಸಂಜೆ ನಡೆಯುವ ಸಭಾಕಾರ್ಯಕ್ರಮದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸತೀಶ್ ಆಳ್ವ, ಉದ್ಯಮಿಗಳು ವಿಟ್ಲ, ಜಿತೇಶ್ ಕಾರ್ಯಾಧ್ಯಕ್ಷರು, ಚಂದ್ರನಾಥ ಬಸದಿ ವಿಟ್ಲ, ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ ನಿ. ನಿರ್ದೇಶಕ ಹರೀಶ್ ನಾಯಕ್, ಲಯನ್ಸ್ ಕ್ಲಬ್ ವಿಟ್ಲ ಸಿಟಿ ಅಧ್ಯಕ್ಷ ಲ|ಜಯರಾಮ ಬಳ್ಳಾಲ್ ಭಾಗವಹಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಗ್ರಂಥಾಲಯ ಹಾಗೂ ಮಾಹಿತಿ ವಿಜ್ಞಾನದಲ್ಲಿ ಡಾಕ್ಟರೇಟ್ ಪದವಿ ಪಡೆದ ಡಾ| ಲೋಕರಾಜ V.S ಇವರನ್ನು ಅಭಿನಂದಿಸಲಿದ್ದಾರೆ.

ಬೆಳಿಗ್ಗೆ ಗಂಟೆ 10.30 ಕ್ಕೆ ಮಕ್ಕಳಿಗಾಗಿ, ಮಹಿಳೆಯರಿಗೆ, ಪುರುಷರಿಗೆ ವಿವಿಧ ಸ್ಪರ್ಧೆಗಳು, ಬಾಲಮುರಳಿ-ಕೃಷ್ಣನ ವೇಷ ಸ್ಪರ್ಧೆ, ಮಹಿಳೆಯರಿಗಾಗಿ ವಿಶೇಷ ಆಕರ್ಷಣಾ ಸ್ಪರ್ಧೆ ಯಶೋಧಾ-ಕೃಷ್ಣ, ಕಬಡ್ಡಿ, ರಂಗೋಲಿ ಸ್ಪರ್ಧೆ, ಮಡಕೆ ಒಡೆಯುವುದು ಕಾರ್ಯಕ್ರಮಗಳು ನಡೆಯಲಿದೆ.

- Advertisement -

Related news

error: Content is protected !!