Friday, May 17, 2024
spot_imgspot_img
spot_imgspot_img

ವಿಟ್ಲ : ಶ್ರೀ ಭಗವತೀ ಸಹಕಾರ ಬ್ಯಾಂಕ್ ನಿ. ಇದರ ವಿಟ್ಲ ಶಾಖೆಯು ಸ್ಥಳಾಂತರಗೊಂಡು ಶುಭಾರಂಭ

- Advertisement -G L Acharya panikkar
- Advertisement -

ವಿಟ್ಲ : ಶ್ರೀ ಭಗವತೀ ಸಹಕಾರ ಬ್ಯಾಂಕ್ ನಿ. ಇದರ ವಿಟ್ಲ ಶಾಖೆಯು ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ವಿ.ಎಚ್ ಕಾಂಪ್ಲೆಕ್ಸ್, ಪುತ್ತೂರು ರಸ್ತೆಯಿಂದ ಹನುಮಾನ್ ಕಾಂಪ್ಲೆಕ್ಸ್ (ಖಾಸಗಿ ಬಸ್ಸು ನಿಲ್ದಾಣದ ಎದುರುಗಡೆ) ಸ್ಥಳಾಂತರಗೊಂಡು ಜೂ. 12 ರಂದು ಶುಭಾರಂಭಗೊಳ್ಳಲಿದೆ.

ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಬಂಗಾರು ಅರಸರು, ವಿಟ್ಲ ಅರಮನೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಹನುಮಾನ್ ಕಾಂಪ್ಲೆಕ್ಸ್‌ನ ಮಾಲಕ ಕೆ.ವೆಂಕಟೇಶ್ ಭಟ್ ದೀಪ ಪ್ರಜ್ವಲನೆ ಮಾಡಲಿದ್ದಾರೆ. ದ.ಕ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಎಚ್.ಎನ್ ರಮೇಶ್ ಭದ್ರತಾ ಕೊಠಡಿ ಉದ್ಘಾಟಿಸಲಿದ್ದಾರೆ. ಮಂಗಳೂರು ಶ್ರೀ ಭಗವತೀ ಸಹಕಾರ ಬ್ಯಾಂಕ್ ನಿ.ಅಧ್ಯಕ್ಷ ನಾರಾಯಣ ಕೆ. ಅಧ್ಯಕ್ಷತೆ ವಹಿಸಲಿದ್ದಾರೆ. ಕುದ್ರೋಳಿ ಶ್ರೀ ಭಗವತೀ ಕ್ಷೇತ್ರ ಕೊಡಿಯಾಲ್‌ಬೈಲ್ ಅಧ್ಯಕ್ಷ ಗಣೇಶ್ ಕುಂಟಲ್ಪಾಡಿ, ಉಳ್ಳಾಲ ಶ್ರೀ ಚೀರುಂಭ ಭಗವತೀ ಕ್ಷೇತ್ರದ ಅಧ್ಯಕ್ಷ ಚಂದ್ರಹಾಸ ಉಳ್ಳಾಲ್, ಎರುಂಬು ಬೋಳ್ನಾಡು ಶ್ರೀ ಭಗವತೀ ಕ್ಷೇತ್ರ ಅಧ್ಯಕ್ಷ ಕೃಷ್ಣ ಎನ್.ಉಚ್ಚಿಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!